ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಪದೇಲ ಎಂಬಲ್ಲಿ ಕೃಷಿ ಜಮೀನಿನ ಪಕ್ಕ ಗಾಯಗೊಂಡ ಸ್ಥಿತಿಯಲ್ಲಿ ಕಡವೆಯೊಂದು ಸೋಮವಾರ ಕಂಡು ಬಂದಿದ್ದು ಸ್ಥಳಿಯರ ನೆರವಿನಿಂದ ಅರಣ್ಯ ಇಲಾಖೆ ರಕ್ಷಿಸಿ ಚಿಕಿತ್ಸೆ ನೀಡಿದೆ.
ಪದೇಲ ಎಂಬಲ್ಲಿ ಕೃಷಿಕ ರಮಾನಂದ ಅವರಿಗೆ ಸೇರಿದ ಕೃಷಿ ತೋಟದ ಪಕ್ಕದಲ್ಲಿ ತೋಟಕ್ಕೆ ಅಳವಡಿಸಿದ ತಂತಿ ಬೇಲಿಯಲ್ಲಿ ಹೆಣ್ಣು ಕಡವೆಯೊಂದು ಸೋಮವಾರ ಸಿಕ್ಕಿ ಹಾಕಿಕೊಡು ಮಲಗಿತ್ತು. ಅದನ್ನು ಗಮನಿಸಿದ ಸ್ಥಳಿಯರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆ ಸಿಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಅದರ ಕಾಲಿಗೆ ಬೇಲಿ ಪರದೆಗಳು ಸಿಕ್ಕಿ ಹಾಕಿಕೊಂಡಿತ್ತು. ಬಳಿಕ ಅವುಗಳನ್ನು ಬಿಡಿಸಿ ತೆರಳಲು ಅವಕಾಶ ಮಾಡಿಕೊಟ್ಟಿದ್ದರು.
ಮಂಗಳವಾರ ಬೆಳಗ್ಗೆ ಕಡವೆ ಅಲ್ಲಿಯೇ ಮಲಗಿಕೊಂಡು ಇದ್ದು ತೆರಳದಿರುವುದನ್ನು ಗಮನಿಸಿದ ಸ್ಥಳಿಯರು ಮತ್ತೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ಬಳಿಕ ಸ್ಥಳಿಯರ ನೆರವಿನಿಂದ ಅರಣ್ಯ ಇಲಾಖೆ ಸಿಬಂದಿಗಳು ಕಡವೆಯನ್ನು ಅರಣ್ಯ ಇಲಾಖೆ ದೇವರಹಳ್ಳಿ ಸಸ್ಯಪಾಲನ ಕ್ಷೇತ್ರಕ್ಕೆ ಕೊಂಡು ಹೋಗಿ ಅಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಿದರು. ಗುತ್ತಿಗಾರು ಪಶುವೈದ್ಯ ಕೇಂದ್ರದ ಪಶುವೈದ್ಯಾಧಿಕಾರಿ ಡಾ. ವೆಂಕಟಾಚಲಪತಿ ಅವರು ಆಗಮಿಸಿ ಕಡವೆಗೆ ಚಿಕಿತ್ಸೆ ನೀಡಿದರು.
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…
2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…