Advertisement
ಸುದ್ದಿಗಳು

ಗಾಯಗೊಂಡ ಕಡವೆಗೆ ಚಿಕಿತ್ಸೆ

Share

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಪದೇಲ ಎಂಬಲ್ಲಿ ಕೃಷಿ ಜಮೀನಿನ ಪಕ್ಕ ಗಾಯಗೊಂಡ ಸ್ಥಿತಿಯಲ್ಲಿ ಕಡವೆಯೊಂದು ಸೋಮವಾರ ಕಂಡು ಬಂದಿದ್ದು ಸ್ಥಳಿಯರ ನೆರವಿನಿಂದ ಅರಣ್ಯ ಇಲಾಖೆ ರಕ್ಷಿಸಿ ಚಿಕಿತ್ಸೆ  ನೀಡಿದೆ.
ಪದೇಲ ಎಂಬಲ್ಲಿ ಕೃಷಿಕ ರಮಾನಂದ ಅವರಿಗೆ ಸೇರಿದ ಕೃಷಿ ತೋಟದ ಪಕ್ಕದಲ್ಲಿ ತೋಟಕ್ಕೆ ಅಳವಡಿಸಿದ ತಂತಿ ಬೇಲಿಯಲ್ಲಿ ಹೆಣ್ಣು ಕಡವೆಯೊಂದು ಸೋಮವಾರ ಸಿಕ್ಕಿ ಹಾಕಿಕೊಡು ಮಲಗಿತ್ತು. ಅದನ್ನು ಗಮನಿಸಿದ ಸ್ಥಳಿಯರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆ ಸಿಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಅದರ ಕಾಲಿಗೆ ಬೇಲಿ ಪರದೆಗಳು ಸಿಕ್ಕಿ ಹಾಕಿಕೊಂಡಿತ್ತು. ಬಳಿಕ ಅವುಗಳನ್ನು ಬಿಡಿಸಿ ತೆರಳಲು ಅವಕಾಶ ಮಾಡಿಕೊಟ್ಟಿದ್ದರು.

Advertisement
Advertisement

ಮಂಗಳವಾರ ಬೆಳಗ್ಗೆ ಕಡವೆ ಅಲ್ಲಿಯೇ ಮಲಗಿಕೊಂಡು ಇದ್ದು ತೆರಳದಿರುವುದನ್ನು ಗಮನಿಸಿದ ಸ್ಥಳಿಯರು ಮತ್ತೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ಬಳಿಕ ಸ್ಥಳಿಯರ ನೆರವಿನಿಂದ ಅರಣ್ಯ ಇಲಾಖೆ ಸಿಬಂದಿಗಳು ಕಡವೆಯನ್ನು ಅರಣ್ಯ ಇಲಾಖೆ ದೇವರಹಳ್ಳಿ ಸಸ್ಯಪಾಲನ ಕ್ಷೇತ್ರಕ್ಕೆ ಕೊಂಡು ಹೋಗಿ ಅಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಿದರು. ಗುತ್ತಿಗಾರು ಪಶುವೈದ್ಯ ಕೇಂದ್ರದ ಪಶುವೈದ್ಯಾಧಿಕಾರಿ ಡಾ. ವೆಂಕಟಾಚಲಪತಿ ಅವರು ಆಗಮಿಸಿ ಕಡವೆಗೆ ಚಿಕಿತ್ಸೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

7 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

7 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

7 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

7 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

7 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

7 hours ago