ಗಾಯಗೊಂಡ ಕಾಡಾನೆಗೆ ಚಿಕಿತ್ಸೆ

May 10, 2019
9:01 PM

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದಲ್ಲಿ  ಗಾಯಗೊಂಡ ಸ್ಥಿತಿಯಲ್ಲಿದ್ದ ಕಾಡಾನೆಗೆ ಶುಕ್ರವಾರ ಚಿಕಿತ್ಸೆ ನೀಡಲಾಗಿದೆ. ನಾಗರಹೊಳೆ ಅಭಯಾರಣ್ಯ ವನ್ಯ ಜೀವಿ ವಿಭಾಗದ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದೆ.

Advertisement
Advertisement

ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡು ಘೀಳಿಡುತ್ತಿದ್ದ ಕಾಡಾನೆಯನ್ನು  ಕಳೆದ ಎರಡು ದಿನಗಳಿಂದ ಸಮತಟ್ಟಾದ ಜಾಗಕ್ಕೆ ಕರೆತರಲು ಅರಣ್ಯ ಇಲಾಖಾ ಸಿಬಂದಿಗಳು ಪ್ರಯತ್ನ ಪಟ್ಟು ಶುಕ್ರವಾರ ಬೆಳಗ್ಗೆ  ಆನೆಗೆ ಚಿಕಿತ್ಸೆ ನೀಡಲು ಇಲಾಖೆಯ ಸಿಬಂದಿಗಳು ಮುಂದಾದರು. ಮಧ್ಯಾಹ್ನದ ಬಳಿಕ  ಆನೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ಪ್ರಜ್ಞೆ ತಪ್ಪಿಸಿ ಚಿಕಿತ್ಸೆ ಆರಂಭ ಮಾಡಲಾಯಿತು.  ಗಾಯಗೊಂಡ ಜಾಗಕ್ಕೆ ಔಷಧಿ ಸಿಂಪಡಿಸಿ ಶುಚಿತ್ವಗೊಳಿಸಿ ಚುಚ್ಚುಮದ್ದು ನೀಡಲಾಯಿತು.

 

ಚಿಕಿತ್ಸೆ ಬಳಿಕ ಸ್ವಲ್ಪ ಹೊತ್ತಿನಲ್ಲೇ  ಆನೆ ಎಚ್ಚರಗೊಂಡು ಚಲನವಲನ ಆರಂಭಿಸಿದೆ. ವೈದ್ಯರ ಸೂಕ್ತ ಚಿಕಿತ್ಸೆ ವಿಧಾನ, ಸಿಬಂದಿಗಳ ಹಾಗೂ ವಿಶೇಷವಾಗಿ ಸ್ಥಳಿಯರು ನೀಡಿದ ಸಹಕಾರದಿಂದ ಚಿಕಿತ್ಸೆ ಕಾರ್ಯಾಚರಣೆ ನಡೆಯಿತು. ಇನ್ನು ಒಂದು ವಾರಗಳ ಕಾಲ ಆನೆಯ ಆರೋಗ್ಯದ ಮೇಲೆ ಅರಣ್ಯ ಇಲಾಖೆಯ ಸಿಬಂದಿಗಳು ನಿಗಾ ಇಡಲಿದ್ದಾರೆ ಎಂದು ಕಾರ್ಯಾಚರಣೆ ಬಳಿಕ ಎ.ಸಿಎಪ್ ಆಸ್ಟ್ರಿನ್ ಪಿ ಸೋನ್ಸ್ ಪ್ರತಿಕ್ರಿಯಿಸಿದರು.

ಗುತ್ತಿಗಾರು ಪಶುವೈದ್ಯಾಧಿಕಾರಿ ಡಾ.ವೆಂಕಟಾಚಲಪತಿ  ಅವರು ಚಿಕಿತ್ಸೆಗೆ ಸಹಕರಿಸಿದರು.

 

ಸುಳ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಸ್ಟ್ರಿನ್ ಪಿ ಸೋನ್ಸ್ ಮಾರ್ಗದರ್ಶನದಲ್ಲಿ ಸುಬ್ರಹ್ಮಣ್ಯ ವಲಯಾರಣ್ಯಧಿಕಾರಿ ತ್ಯಾಗರಾಜ್ ಮತ್ತು ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು, ಸಿಬಂದಿಗಳು ಕಾಡಾನೆ ಚಿಕಿತ್ಸೆಯಲ್ಲಿ  ತೊಡಗಿದರು. ಇಲಾಖೆಯ ಸಿಬಂದಿಗಳಾದ  ಸಂತೋಷ್, ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಸಿಬಂದಿಗಳು ಕಳೆದೆರಡು ದಿನಗಳಿಂದ ಸತತ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror