Advertisement
ಸುದ್ದಿಗಳು

ಗಾಯಗೊಂಡ ಕಾಡಾನೆಗೆ ಚಿಕಿತ್ಸೆ

Share

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದಲ್ಲಿ  ಗಾಯಗೊಂಡ ಸ್ಥಿತಿಯಲ್ಲಿದ್ದ ಕಾಡಾನೆಗೆ ಶುಕ್ರವಾರ ಚಿಕಿತ್ಸೆ ನೀಡಲಾಗಿದೆ. ನಾಗರಹೊಳೆ ಅಭಯಾರಣ್ಯ ವನ್ಯ ಜೀವಿ ವಿಭಾಗದ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದೆ.

Advertisement
Advertisement

ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡು ಘೀಳಿಡುತ್ತಿದ್ದ ಕಾಡಾನೆಯನ್ನು  ಕಳೆದ ಎರಡು ದಿನಗಳಿಂದ ಸಮತಟ್ಟಾದ ಜಾಗಕ್ಕೆ ಕರೆತರಲು ಅರಣ್ಯ ಇಲಾಖಾ ಸಿಬಂದಿಗಳು ಪ್ರಯತ್ನ ಪಟ್ಟು ಶುಕ್ರವಾರ ಬೆಳಗ್ಗೆ  ಆನೆಗೆ ಚಿಕಿತ್ಸೆ ನೀಡಲು ಇಲಾಖೆಯ ಸಿಬಂದಿಗಳು ಮುಂದಾದರು. ಮಧ್ಯಾಹ್ನದ ಬಳಿಕ  ಆನೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ಪ್ರಜ್ಞೆ ತಪ್ಪಿಸಿ ಚಿಕಿತ್ಸೆ ಆರಂಭ ಮಾಡಲಾಯಿತು.  ಗಾಯಗೊಂಡ ಜಾಗಕ್ಕೆ ಔಷಧಿ ಸಿಂಪಡಿಸಿ ಶುಚಿತ್ವಗೊಳಿಸಿ ಚುಚ್ಚುಮದ್ದು ನೀಡಲಾಯಿತು.

Advertisement

 

Advertisement

ಚಿಕಿತ್ಸೆ ಬಳಿಕ ಸ್ವಲ್ಪ ಹೊತ್ತಿನಲ್ಲೇ  ಆನೆ ಎಚ್ಚರಗೊಂಡು ಚಲನವಲನ ಆರಂಭಿಸಿದೆ. ವೈದ್ಯರ ಸೂಕ್ತ ಚಿಕಿತ್ಸೆ ವಿಧಾನ, ಸಿಬಂದಿಗಳ ಹಾಗೂ ವಿಶೇಷವಾಗಿ ಸ್ಥಳಿಯರು ನೀಡಿದ ಸಹಕಾರದಿಂದ ಚಿಕಿತ್ಸೆ ಕಾರ್ಯಾಚರಣೆ ನಡೆಯಿತು. ಇನ್ನು ಒಂದು ವಾರಗಳ ಕಾಲ ಆನೆಯ ಆರೋಗ್ಯದ ಮೇಲೆ ಅರಣ್ಯ ಇಲಾಖೆಯ ಸಿಬಂದಿಗಳು ನಿಗಾ ಇಡಲಿದ್ದಾರೆ ಎಂದು ಕಾರ್ಯಾಚರಣೆ ಬಳಿಕ ಎ.ಸಿಎಪ್ ಆಸ್ಟ್ರಿನ್ ಪಿ ಸೋನ್ಸ್ ಪ್ರತಿಕ್ರಿಯಿಸಿದರು.

ಗುತ್ತಿಗಾರು ಪಶುವೈದ್ಯಾಧಿಕಾರಿ ಡಾ.ವೆಂಕಟಾಚಲಪತಿ  ಅವರು ಚಿಕಿತ್ಸೆಗೆ ಸಹಕರಿಸಿದರು.

Advertisement

 

Advertisement

ಸುಳ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಸ್ಟ್ರಿನ್ ಪಿ ಸೋನ್ಸ್ ಮಾರ್ಗದರ್ಶನದಲ್ಲಿ ಸುಬ್ರಹ್ಮಣ್ಯ ವಲಯಾರಣ್ಯಧಿಕಾರಿ ತ್ಯಾಗರಾಜ್ ಮತ್ತು ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು, ಸಿಬಂದಿಗಳು ಕಾಡಾನೆ ಚಿಕಿತ್ಸೆಯಲ್ಲಿ  ತೊಡಗಿದರು. ಇಲಾಖೆಯ ಸಿಬಂದಿಗಳಾದ  ಸಂತೋಷ್, ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಸಿಬಂದಿಗಳು ಕಳೆದೆರಡು ದಿನಗಳಿಂದ ಸತತ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

10 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

10 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

15 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

15 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

16 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

17 hours ago