Advertisement
ಸುದ್ದಿಗಳು

ಗಾಯಗೊಂಡ ಕಾಡಾನೆಗೆ ಚಿಕಿತ್ಸೆ

Share

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದಲ್ಲಿ  ಗಾಯಗೊಂಡ ಸ್ಥಿತಿಯಲ್ಲಿದ್ದ ಕಾಡಾನೆಗೆ ಶುಕ್ರವಾರ ಚಿಕಿತ್ಸೆ ನೀಡಲಾಗಿದೆ. ನಾಗರಹೊಳೆ ಅಭಯಾರಣ್ಯ ವನ್ಯ ಜೀವಿ ವಿಭಾಗದ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದೆ.

ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡು ಘೀಳಿಡುತ್ತಿದ್ದ ಕಾಡಾನೆಯನ್ನು  ಕಳೆದ ಎರಡು ದಿನಗಳಿಂದ ಸಮತಟ್ಟಾದ ಜಾಗಕ್ಕೆ ಕರೆತರಲು ಅರಣ್ಯ ಇಲಾಖಾ ಸಿಬಂದಿಗಳು ಪ್ರಯತ್ನ ಪಟ್ಟು ಶುಕ್ರವಾರ ಬೆಳಗ್ಗೆ  ಆನೆಗೆ ಚಿಕಿತ್ಸೆ ನೀಡಲು ಇಲಾಖೆಯ ಸಿಬಂದಿಗಳು ಮುಂದಾದರು. ಮಧ್ಯಾಹ್ನದ ಬಳಿಕ  ಆನೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ಪ್ರಜ್ಞೆ ತಪ್ಪಿಸಿ ಚಿಕಿತ್ಸೆ ಆರಂಭ ಮಾಡಲಾಯಿತು.  ಗಾಯಗೊಂಡ ಜಾಗಕ್ಕೆ ಔಷಧಿ ಸಿಂಪಡಿಸಿ ಶುಚಿತ್ವಗೊಳಿಸಿ ಚುಚ್ಚುಮದ್ದು ನೀಡಲಾಯಿತು.

 

ಚಿಕಿತ್ಸೆ ಬಳಿಕ ಸ್ವಲ್ಪ ಹೊತ್ತಿನಲ್ಲೇ  ಆನೆ ಎಚ್ಚರಗೊಂಡು ಚಲನವಲನ ಆರಂಭಿಸಿದೆ. ವೈದ್ಯರ ಸೂಕ್ತ ಚಿಕಿತ್ಸೆ ವಿಧಾನ, ಸಿಬಂದಿಗಳ ಹಾಗೂ ವಿಶೇಷವಾಗಿ ಸ್ಥಳಿಯರು ನೀಡಿದ ಸಹಕಾರದಿಂದ ಚಿಕಿತ್ಸೆ ಕಾರ್ಯಾಚರಣೆ ನಡೆಯಿತು. ಇನ್ನು ಒಂದು ವಾರಗಳ ಕಾಲ ಆನೆಯ ಆರೋಗ್ಯದ ಮೇಲೆ ಅರಣ್ಯ ಇಲಾಖೆಯ ಸಿಬಂದಿಗಳು ನಿಗಾ ಇಡಲಿದ್ದಾರೆ ಎಂದು ಕಾರ್ಯಾಚರಣೆ ಬಳಿಕ ಎ.ಸಿಎಪ್ ಆಸ್ಟ್ರಿನ್ ಪಿ ಸೋನ್ಸ್ ಪ್ರತಿಕ್ರಿಯಿಸಿದರು.

ಗುತ್ತಿಗಾರು ಪಶುವೈದ್ಯಾಧಿಕಾರಿ ಡಾ.ವೆಂಕಟಾಚಲಪತಿ  ಅವರು ಚಿಕಿತ್ಸೆಗೆ ಸಹಕರಿಸಿದರು.

 

ಸುಳ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಸ್ಟ್ರಿನ್ ಪಿ ಸೋನ್ಸ್ ಮಾರ್ಗದರ್ಶನದಲ್ಲಿ ಸುಬ್ರಹ್ಮಣ್ಯ ವಲಯಾರಣ್ಯಧಿಕಾರಿ ತ್ಯಾಗರಾಜ್ ಮತ್ತು ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು, ಸಿಬಂದಿಗಳು ಕಾಡಾನೆ ಚಿಕಿತ್ಸೆಯಲ್ಲಿ  ತೊಡಗಿದರು. ಇಲಾಖೆಯ ಸಿಬಂದಿಗಳಾದ  ಸಂತೋಷ್, ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಸಿಬಂದಿಗಳು ಕಳೆದೆರಡು ದಿನಗಳಿಂದ ಸತತ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

5 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

14 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

18 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago