Advertisement
ಸುದ್ದಿಗಳು

ಗಾಯಗೊಂಡ ಕಾಡಾನೆಗೆ ಚಿಕಿತ್ಸೆ

Share

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದಲ್ಲಿ  ಗಾಯಗೊಂಡ ಸ್ಥಿತಿಯಲ್ಲಿದ್ದ ಕಾಡಾನೆಗೆ ಶುಕ್ರವಾರ ಚಿಕಿತ್ಸೆ ನೀಡಲಾಗಿದೆ. ನಾಗರಹೊಳೆ ಅಭಯಾರಣ್ಯ ವನ್ಯ ಜೀವಿ ವಿಭಾಗದ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದೆ.

ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡು ಘೀಳಿಡುತ್ತಿದ್ದ ಕಾಡಾನೆಯನ್ನು  ಕಳೆದ ಎರಡು ದಿನಗಳಿಂದ ಸಮತಟ್ಟಾದ ಜಾಗಕ್ಕೆ ಕರೆತರಲು ಅರಣ್ಯ ಇಲಾಖಾ ಸಿಬಂದಿಗಳು ಪ್ರಯತ್ನ ಪಟ್ಟು ಶುಕ್ರವಾರ ಬೆಳಗ್ಗೆ  ಆನೆಗೆ ಚಿಕಿತ್ಸೆ ನೀಡಲು ಇಲಾಖೆಯ ಸಿಬಂದಿಗಳು ಮುಂದಾದರು. ಮಧ್ಯಾಹ್ನದ ಬಳಿಕ  ಆನೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ಪ್ರಜ್ಞೆ ತಪ್ಪಿಸಿ ಚಿಕಿತ್ಸೆ ಆರಂಭ ಮಾಡಲಾಯಿತು.  ಗಾಯಗೊಂಡ ಜಾಗಕ್ಕೆ ಔಷಧಿ ಸಿಂಪಡಿಸಿ ಶುಚಿತ್ವಗೊಳಿಸಿ ಚುಚ್ಚುಮದ್ದು ನೀಡಲಾಯಿತು.

 

ಚಿಕಿತ್ಸೆ ಬಳಿಕ ಸ್ವಲ್ಪ ಹೊತ್ತಿನಲ್ಲೇ  ಆನೆ ಎಚ್ಚರಗೊಂಡು ಚಲನವಲನ ಆರಂಭಿಸಿದೆ. ವೈದ್ಯರ ಸೂಕ್ತ ಚಿಕಿತ್ಸೆ ವಿಧಾನ, ಸಿಬಂದಿಗಳ ಹಾಗೂ ವಿಶೇಷವಾಗಿ ಸ್ಥಳಿಯರು ನೀಡಿದ ಸಹಕಾರದಿಂದ ಚಿಕಿತ್ಸೆ ಕಾರ್ಯಾಚರಣೆ ನಡೆಯಿತು. ಇನ್ನು ಒಂದು ವಾರಗಳ ಕಾಲ ಆನೆಯ ಆರೋಗ್ಯದ ಮೇಲೆ ಅರಣ್ಯ ಇಲಾಖೆಯ ಸಿಬಂದಿಗಳು ನಿಗಾ ಇಡಲಿದ್ದಾರೆ ಎಂದು ಕಾರ್ಯಾಚರಣೆ ಬಳಿಕ ಎ.ಸಿಎಪ್ ಆಸ್ಟ್ರಿನ್ ಪಿ ಸೋನ್ಸ್ ಪ್ರತಿಕ್ರಿಯಿಸಿದರು.

ಗುತ್ತಿಗಾರು ಪಶುವೈದ್ಯಾಧಿಕಾರಿ ಡಾ.ವೆಂಕಟಾಚಲಪತಿ  ಅವರು ಚಿಕಿತ್ಸೆಗೆ ಸಹಕರಿಸಿದರು.

 

ಸುಳ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಸ್ಟ್ರಿನ್ ಪಿ ಸೋನ್ಸ್ ಮಾರ್ಗದರ್ಶನದಲ್ಲಿ ಸುಬ್ರಹ್ಮಣ್ಯ ವಲಯಾರಣ್ಯಧಿಕಾರಿ ತ್ಯಾಗರಾಜ್ ಮತ್ತು ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು, ಸಿಬಂದಿಗಳು ಕಾಡಾನೆ ಚಿಕಿತ್ಸೆಯಲ್ಲಿ  ತೊಡಗಿದರು. ಇಲಾಖೆಯ ಸಿಬಂದಿಗಳಾದ  ಸಂತೋಷ್, ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಸಿಬಂದಿಗಳು ಕಳೆದೆರಡು ದಿನಗಳಿಂದ ಸತತ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

3 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

3 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

4 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

6 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

18 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

18 hours ago