ಗಿರಿಜನ ಸಂಸ್ಕೃತಿ ಯುವಜನತೆ ಪರಿಚಯವಾಗಬೇಕು: ಆಶಾ ತಿಮ್ಮಪ್ಪ

September 23, 2019
6:00 PM

ಸುಬ್ರಹ್ಮಣ್ಯ:ಗಿರಿಜನರ ಗುಣಾತ್ಮಕ ಆಚಾರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಸಂಸ್ಕೃತಿಯನ್ನು ಮಕ್ಕಳು ಮತ್ತು ಯುವಜನತೆಗೆ ತಿಳಿಸಿಕೊಡುವ ಅಗತ್ಯವಿದೆ ಎಂದು ಜಿ.ಪಂ ಸದಸ್ಯೆ ಅಶಾ ತಿಮ್ಮಪ್ಪ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೆಎಸ್‍ಎಸ್ ಕಾಲೇಜು ಸಹಕಾರದಲ್ಲಿ ಕಾಲೇಜು ಸಭಾಂಗಣದಲ್ಲಿ  ನಡೆದ ಗಿರಿಜನ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸಂಸ್ಕೃತಿ ಇಂದು ನಶಿಸುತ್ತಿದೆ. ಗಿರಿಜನರು ಇಂದಿಗೂ ಕೂಡ ತಮ್ಮ ಪುರಾತನ ಸಂಸ್ಕೃತಿಯನ್ನು ಉಳಿಸಿಕೊಂಡಿರುವುದು ಸಂತೋಷದ ವಿಚಾರ. ಇದನ್ನು ಮುಂದೆಯೂ ಉಳಿಸುವ ಪ್ರಯತ್ನ ಯುವಜನತೆಯಿಂದ ಆಗಬೇಕು ಅದಕ್ಕೆ ಗಿರಿಜನ ಉತ್ಸವದ ಮೂಲಕ ಪ್ರೋತ್ಸಾಹ ಸಿಗುತ್ತಿದೆ ಎಂದು ಅವರು ಹೇಳಿದರು.

ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ವಿವಿದ ಸಮುದಾಯದ ಮಂದಿ ವಾಸಿಸುತ್ತಿದ್ದು ಇಲ್ಲಿ ಗಿರಿಜನ ಉತ್ಸವ ನಡೆಯುತ್ತಿರುವುದು ಸಂತೋಷ ತಂದಿದೆ. ವಿವಿಧ ಸಮುದಾಯದ ಆಚರ ವಿಚಾರ, ಕಲೆಗಳು ಗರಿಜನ ಉತ್ಸವದ ಮೂಲಕ ಪ್ರದರ್ಶನಗೊಂಡು ಇಂದಿನ ಸಮುದಾಯಕ್ಕೆ ತಿಳಿದಾಗ ಸಂಪ್ರದಾಯ ಜೀವಂತಿಕೆ ಉಳಿಯುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಾಜೇಶ್ ಜಿ ಪ್ರಸ್ತಾವನೆಗೈದು ಮಾತನಾಡಿ ನಶಿಸುತ್ತಿರುವ ಸಾಂಪ್ರಾದಾಯಿಕ ಕಲೆಗಳನ್ನು ಯುವಜನತೆಗೆ ಪರಿಚಯಿಸಲು ಗಿರಿಜನ ಉತ್ಸವ ಹಮ್ಮಿಕೊಳ್ಳಾಗಿದೆ ಎಂದರು.
ಕಾಲೇಜಿನ ಇತಿಹಾಸ ಮತ್ತು ಸಮಾಜಶಾಸ್ತ್ರ ವಿಭಾಗದ ಸಹಕಾರ ನೀಡಿದರು. ಉಪನ್ಯಾಸಕ ಡಾ. ಪ್ರಸಾದ್ ವಂದಿಸಿದರು. ಉಪನ್ಯಾಸಕಿ ಪ್ರೋ ಆರತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror