Advertisement
ಸುದ್ದಿಗಳು

ಗಿರಿಜನ ಸಂಸ್ಕೃತಿ ಯುವಜನತೆ ಪರಿಚಯವಾಗಬೇಕು: ಆಶಾ ತಿಮ್ಮಪ್ಪ

Share

ಸುಬ್ರಹ್ಮಣ್ಯ:ಗಿರಿಜನರ ಗುಣಾತ್ಮಕ ಆಚಾರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಸಂಸ್ಕೃತಿಯನ್ನು ಮಕ್ಕಳು ಮತ್ತು ಯುವಜನತೆಗೆ ತಿಳಿಸಿಕೊಡುವ ಅಗತ್ಯವಿದೆ ಎಂದು ಜಿ.ಪಂ ಸದಸ್ಯೆ ಅಶಾ ತಿಮ್ಮಪ್ಪ ಹೇಳಿದರು.

Advertisement
Advertisement
Advertisement
Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೆಎಸ್‍ಎಸ್ ಕಾಲೇಜು ಸಹಕಾರದಲ್ಲಿ ಕಾಲೇಜು ಸಭಾಂಗಣದಲ್ಲಿ  ನಡೆದ ಗಿರಿಜನ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸಂಸ್ಕೃತಿ ಇಂದು ನಶಿಸುತ್ತಿದೆ. ಗಿರಿಜನರು ಇಂದಿಗೂ ಕೂಡ ತಮ್ಮ ಪುರಾತನ ಸಂಸ್ಕೃತಿಯನ್ನು ಉಳಿಸಿಕೊಂಡಿರುವುದು ಸಂತೋಷದ ವಿಚಾರ. ಇದನ್ನು ಮುಂದೆಯೂ ಉಳಿಸುವ ಪ್ರಯತ್ನ ಯುವಜನತೆಯಿಂದ ಆಗಬೇಕು ಅದಕ್ಕೆ ಗಿರಿಜನ ಉತ್ಸವದ ಮೂಲಕ ಪ್ರೋತ್ಸಾಹ ಸಿಗುತ್ತಿದೆ ಎಂದು ಅವರು ಹೇಳಿದರು.

Advertisement

ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ವಿವಿದ ಸಮುದಾಯದ ಮಂದಿ ವಾಸಿಸುತ್ತಿದ್ದು ಇಲ್ಲಿ ಗಿರಿಜನ ಉತ್ಸವ ನಡೆಯುತ್ತಿರುವುದು ಸಂತೋಷ ತಂದಿದೆ. ವಿವಿಧ ಸಮುದಾಯದ ಆಚರ ವಿಚಾರ, ಕಲೆಗಳು ಗರಿಜನ ಉತ್ಸವದ ಮೂಲಕ ಪ್ರದರ್ಶನಗೊಂಡು ಇಂದಿನ ಸಮುದಾಯಕ್ಕೆ ತಿಳಿದಾಗ ಸಂಪ್ರದಾಯ ಜೀವಂತಿಕೆ ಉಳಿಯುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಾಜೇಶ್ ಜಿ ಪ್ರಸ್ತಾವನೆಗೈದು ಮಾತನಾಡಿ ನಶಿಸುತ್ತಿರುವ ಸಾಂಪ್ರಾದಾಯಿಕ ಕಲೆಗಳನ್ನು ಯುವಜನತೆಗೆ ಪರಿಚಯಿಸಲು ಗಿರಿಜನ ಉತ್ಸವ ಹಮ್ಮಿಕೊಳ್ಳಾಗಿದೆ ಎಂದರು.
ಕಾಲೇಜಿನ ಇತಿಹಾಸ ಮತ್ತು ಸಮಾಜಶಾಸ್ತ್ರ ವಿಭಾಗದ ಸಹಕಾರ ನೀಡಿದರು. ಉಪನ್ಯಾಸಕ ಡಾ. ಪ್ರಸಾದ್ ವಂದಿಸಿದರು. ಉಪನ್ಯಾಸಕಿ ಪ್ರೋ ಆರತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…

9 hours ago

ಕಾಫಿ ಉತ್ಪಾದನೆಯಲ್ಲಿ ಭಾರತವು  ಏಳನೇ ದೇಶ |

ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…

22 hours ago

ತೊಗರಿ ಖರೀದಿಗೆ ನೋಂದಣಿ ಮಾಡಿಸುವಂತೆ ಕಲಬುರ್ಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮನವಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…

22 hours ago

ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |

ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…

23 hours ago

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…

1 day ago

ಕುಂಭಸ್ನಾನ ಮತ್ತು ವಿಜ್ಞಾನ

ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…

1 day ago