Advertisement
ಸುದ್ದಿಗಳು

ಗಿರಿಜನ ಸಂಸ್ಕೃತಿ ಯುವಜನತೆ ಪರಿಚಯವಾಗಬೇಕು: ಆಶಾ ತಿಮ್ಮಪ್ಪ

Share

ಸುಬ್ರಹ್ಮಣ್ಯ:ಗಿರಿಜನರ ಗುಣಾತ್ಮಕ ಆಚಾರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಸಂಸ್ಕೃತಿಯನ್ನು ಮಕ್ಕಳು ಮತ್ತು ಯುವಜನತೆಗೆ ತಿಳಿಸಿಕೊಡುವ ಅಗತ್ಯವಿದೆ ಎಂದು ಜಿ.ಪಂ ಸದಸ್ಯೆ ಅಶಾ ತಿಮ್ಮಪ್ಪ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೆಎಸ್‍ಎಸ್ ಕಾಲೇಜು ಸಹಕಾರದಲ್ಲಿ ಕಾಲೇಜು ಸಭಾಂಗಣದಲ್ಲಿ  ನಡೆದ ಗಿರಿಜನ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸಂಸ್ಕೃತಿ ಇಂದು ನಶಿಸುತ್ತಿದೆ. ಗಿರಿಜನರು ಇಂದಿಗೂ ಕೂಡ ತಮ್ಮ ಪುರಾತನ ಸಂಸ್ಕೃತಿಯನ್ನು ಉಳಿಸಿಕೊಂಡಿರುವುದು ಸಂತೋಷದ ವಿಚಾರ. ಇದನ್ನು ಮುಂದೆಯೂ ಉಳಿಸುವ ಪ್ರಯತ್ನ ಯುವಜನತೆಯಿಂದ ಆಗಬೇಕು ಅದಕ್ಕೆ ಗಿರಿಜನ ಉತ್ಸವದ ಮೂಲಕ ಪ್ರೋತ್ಸಾಹ ಸಿಗುತ್ತಿದೆ ಎಂದು ಅವರು ಹೇಳಿದರು.

ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ವಿವಿದ ಸಮುದಾಯದ ಮಂದಿ ವಾಸಿಸುತ್ತಿದ್ದು ಇಲ್ಲಿ ಗಿರಿಜನ ಉತ್ಸವ ನಡೆಯುತ್ತಿರುವುದು ಸಂತೋಷ ತಂದಿದೆ. ವಿವಿಧ ಸಮುದಾಯದ ಆಚರ ವಿಚಾರ, ಕಲೆಗಳು ಗರಿಜನ ಉತ್ಸವದ ಮೂಲಕ ಪ್ರದರ್ಶನಗೊಂಡು ಇಂದಿನ ಸಮುದಾಯಕ್ಕೆ ತಿಳಿದಾಗ ಸಂಪ್ರದಾಯ ಜೀವಂತಿಕೆ ಉಳಿಯುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಾಜೇಶ್ ಜಿ ಪ್ರಸ್ತಾವನೆಗೈದು ಮಾತನಾಡಿ ನಶಿಸುತ್ತಿರುವ ಸಾಂಪ್ರಾದಾಯಿಕ ಕಲೆಗಳನ್ನು ಯುವಜನತೆಗೆ ಪರಿಚಯಿಸಲು ಗಿರಿಜನ ಉತ್ಸವ ಹಮ್ಮಿಕೊಳ್ಳಾಗಿದೆ ಎಂದರು.
ಕಾಲೇಜಿನ ಇತಿಹಾಸ ಮತ್ತು ಸಮಾಜಶಾಸ್ತ್ರ ವಿಭಾಗದ ಸಹಕಾರ ನೀಡಿದರು. ಉಪನ್ಯಾಸಕ ಡಾ. ಪ್ರಸಾದ್ ವಂದಿಸಿದರು. ಉಪನ್ಯಾಸಕಿ ಪ್ರೋ ಆರತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

9 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

10 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago