Advertisement
ಸುದ್ದಿಗಳು

ಗಿರಿಜನ ಸಂಸ್ಕೃತಿ ಯುವಜನತೆ ಪರಿಚಯವಾಗಬೇಕು: ಆಶಾ ತಿಮ್ಮಪ್ಪ

Share

ಸುಬ್ರಹ್ಮಣ್ಯ:ಗಿರಿಜನರ ಗುಣಾತ್ಮಕ ಆಚಾರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಸಂಸ್ಕೃತಿಯನ್ನು ಮಕ್ಕಳು ಮತ್ತು ಯುವಜನತೆಗೆ ತಿಳಿಸಿಕೊಡುವ ಅಗತ್ಯವಿದೆ ಎಂದು ಜಿ.ಪಂ ಸದಸ್ಯೆ ಅಶಾ ತಿಮ್ಮಪ್ಪ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೆಎಸ್‍ಎಸ್ ಕಾಲೇಜು ಸಹಕಾರದಲ್ಲಿ ಕಾಲೇಜು ಸಭಾಂಗಣದಲ್ಲಿ  ನಡೆದ ಗಿರಿಜನ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸಂಸ್ಕೃತಿ ಇಂದು ನಶಿಸುತ್ತಿದೆ. ಗಿರಿಜನರು ಇಂದಿಗೂ ಕೂಡ ತಮ್ಮ ಪುರಾತನ ಸಂಸ್ಕೃತಿಯನ್ನು ಉಳಿಸಿಕೊಂಡಿರುವುದು ಸಂತೋಷದ ವಿಚಾರ. ಇದನ್ನು ಮುಂದೆಯೂ ಉಳಿಸುವ ಪ್ರಯತ್ನ ಯುವಜನತೆಯಿಂದ ಆಗಬೇಕು ಅದಕ್ಕೆ ಗಿರಿಜನ ಉತ್ಸವದ ಮೂಲಕ ಪ್ರೋತ್ಸಾಹ ಸಿಗುತ್ತಿದೆ ಎಂದು ಅವರು ಹೇಳಿದರು.

ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ವಿವಿದ ಸಮುದಾಯದ ಮಂದಿ ವಾಸಿಸುತ್ತಿದ್ದು ಇಲ್ಲಿ ಗಿರಿಜನ ಉತ್ಸವ ನಡೆಯುತ್ತಿರುವುದು ಸಂತೋಷ ತಂದಿದೆ. ವಿವಿಧ ಸಮುದಾಯದ ಆಚರ ವಿಚಾರ, ಕಲೆಗಳು ಗರಿಜನ ಉತ್ಸವದ ಮೂಲಕ ಪ್ರದರ್ಶನಗೊಂಡು ಇಂದಿನ ಸಮುದಾಯಕ್ಕೆ ತಿಳಿದಾಗ ಸಂಪ್ರದಾಯ ಜೀವಂತಿಕೆ ಉಳಿಯುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಾಜೇಶ್ ಜಿ ಪ್ರಸ್ತಾವನೆಗೈದು ಮಾತನಾಡಿ ನಶಿಸುತ್ತಿರುವ ಸಾಂಪ್ರಾದಾಯಿಕ ಕಲೆಗಳನ್ನು ಯುವಜನತೆಗೆ ಪರಿಚಯಿಸಲು ಗಿರಿಜನ ಉತ್ಸವ ಹಮ್ಮಿಕೊಳ್ಳಾಗಿದೆ ಎಂದರು.
ಕಾಲೇಜಿನ ಇತಿಹಾಸ ಮತ್ತು ಸಮಾಜಶಾಸ್ತ್ರ ವಿಭಾಗದ ಸಹಕಾರ ನೀಡಿದರು. ಉಪನ್ಯಾಸಕ ಡಾ. ಪ್ರಸಾದ್ ವಂದಿಸಿದರು. ಉಪನ್ಯಾಸಕಿ ಪ್ರೋ ಆರತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

2 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

3 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

5 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

8 hours ago