ಗುಡಿಸಲೂ ಅಲ್ಲದ ಮನೆಯ ಕತೆ ಇದು…!

June 22, 2019
12:00 PM

ಸುಳ್ಯ: ಇದು ಗುಡಿಸಲೂ ಅಲ್ಲದ ಮನೆಯೊಂದರ ಕತೆ. ಅಚ್ಚರಿಯಾಗುತ್ತದೆ, ಆಧುನಿಕ ಎಲ್ಲಾ ಸೌಲಭ್ಯಗಳು ಈಗ ಸಾಲದೆನ್ನುವ ಕಾಲದಲ್ಲಿ , ಆಡಳಿತ ಸುಧಾರಣೆ ಎನ್ನುವ ಕಾಲದಲ್ಲಿ  ಈಗಲೂ ಇಂತಹದ್ದೊಂದು ಮನೆ ಇದೆಯೇ ಎಂಬ ಪ್ರಶ್ನೆ ಮೂಡುತ್ತದೆ.

Advertisement
Advertisement
Advertisement
Advertisement

ಸುಳ್ಯ ತಾಲೂಕಿನ ಮಂಡೆಕೋಲು ಬಳಿ ಒಂದು ಗುಡಿಸಲು ಇದೆ. ಪ್ಲಾಸ್ಟಿಕ್ ಹೊದಿಕೆ ಹಾಕಿದ, ಸರಿಯಾದ ನೆಲವೂ ಇಲ್ಲದ ಮನೆ ಇದೆ. ಈಗ ಯುವ ಬ್ರಿಗೆಡ್ ಇವರಿಗೊಂದು ಪುಟ್ಟ ಮನೆ ನಿರ್ಮಾಣಕ್ಕೆ ಮುಂದಾಗಿದೆ. ಆಡಳಿತ ವ್ಯವಸ್ಥೆಗೆ ಈಗಲಾದರೂ ಇದು ಕಾಣಬೇಕು…!

Advertisement

 

Advertisement

 

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಡಿವಾಳ ಮೂಲೆ ಎಂಬಲ್ಲಿ  ಪಕೀರ ಎಂಬವರ ಮನೆಯ ಕತೆ ಇದು. ಸಣ್ಣ ಕುಟುಂಬ ಇದು. ಪುಟ್ಟ ಪುಟ್ಟ ಮಕ್ಕಳೊಂದಿಗಿನ ಕುಟುಂಬ.  ದಿನವೂ ದುಡಿದು ಬದುಕು ಸಾಗಿಸುವ ವ್ಯವಸ್ಥೆ ಇವರದು. ಸ್ವಂತ ಜಾಗ ಇದೆ. ಸ್ಥಳೀಯರು ಕೊಡಮಾಡಿದ ಜಾಗ ಇದೆ. ಆದರೆ ರೇಶನ್ ಕಾರ್ಡ್, ಆಧಾರ್ ಕಾರ್ಡ್ ಸಹಿತ ಯಾವುದೇ ದಾಖಲೆ ಇಲ್ಲ. ಹೀಗಾಗಿ ಯಾವ ವ್ಯವಸ್ಥೆಯೂ ಇದುವರೆಗೆ ಆಗಿಲ್ಲ ಎನ್ನುವುದು  ಈಗಿನ ಮಾಹಿತಿ.

Advertisement

ಕಳೆದ ಅನೇಕ ವರಷಗಳಿಂದ ಇದೇ ಮನೆಯಲ್ಲಿ  ಅವರು ವಾಸ ಮಾಡುತ್ತಿದ್ದಾರೆ. ಮಳೆಗಾಲವಂತೂ ಇವರ ಬದುಕು ಅಯೋಮಯ. ವ್ಯವಸ್ಥೆಯ ಕಾರಣದಿಂದ  ಮಕ್ಕಳೂ ಶಾಲೆಗೂ ಹೋಗಲಾಗದೆ ಮನೆಯಲ್ಲೂ ಉಳಿದುಕೊಳ್ಳಲಾದರ ಸ್ಥಿತಿ ಇದೆ. ಚುನಾವಣೆ ಬಂದಾಗ ಇಲ್ಲಿನ ಎರಡು ಓಟಿಗಾಗಿ ಹೆಚ್ಚು ಗಮನವೂ  ಪಕ್ಷಗಳು ನೀಡದೇ ಇದ್ದರೆ ಪಕೀರ ಅವರ ಮದ್ಯಪಾನದ ಚಟವೂ ಅವರನ್ನು ದೂರ ಮಾಡಿದೆ. ಹೀಗಾಗಿ ಅವರ  ಮಕ್ಕಳೂ ದಿಕ್ಕಿಲ್ಲದಾಗಿದ್ದಾರೆ.

 

Advertisement

 

Advertisement

ಇದೀಗ ಯುವ ಬ್ರಿಗೇಟ್ ಈ ಕುಟುಂಬನ್ನು  ಗಮನಿಸಿ ಸಹಾಯಕ್ಕೆ ಮುಂದಾಗಿದೆ. ಪುಟ್ಟ ಮನೆಯನ್ನು  ದಾನಿಗಳ ಸಹಾಯದಿಂದ ನಿರ್ಮಾಣ ಮಾಡಲು ಮುಂದಾಗಿದೆ. ಭಾನುವಾರ ಮನೆಯನ್ನು  ಕಟ್ಟಿಕೊಡುವ ಕೆಲಸ ಮಾಡುತ್ತದೆ.

ಪಕೀರ ಕುಟುಂಬದ ಮಕ್ಕಳನ್ನು ಶಾಲೆಗೆ ಸೇರಿಸುವ ಪ್ರಯತ್ನ ಮಾಡುತ್ತಿದ್ದೇವೆ . ಅವರಿಗೆ ಓದಿನ ವ್ಯವಸ್ಥೆಗೆ ಮಾತುಕತೆ ನಡೆಯುತ್ತದೆ ಎನ್ನುತ್ತಾರೆ ಯುವಬ್ರಿಗೆಡ್ ಮುಂದಾಳು ಶರತ್.   ಈ ಮೂಲಕ ಪಕೀರ ಕುಟುಂಬಕ್ಕೆ ಆಧಾರ ಸಿಗಲಿ. ಆಧಾರ್ ಕಾರ್ಡ್ ಇಲ್ಲದೇ ಇದ್ದರೂ ಈಗ ಬದುಕಿಗೆ ಆಧಾರ ಸಿಗುವಂತಾಗಲಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ
ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ
January 31, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror