Advertisement
ಸುದ್ದಿಗಳು

ಗುಡಿಸಲೂ ಅಲ್ಲದ ಮನೆಯ ಕತೆ ಇದು…!

Share

ಸುಳ್ಯ: ಇದು ಗುಡಿಸಲೂ ಅಲ್ಲದ ಮನೆಯೊಂದರ ಕತೆ. ಅಚ್ಚರಿಯಾಗುತ್ತದೆ, ಆಧುನಿಕ ಎಲ್ಲಾ ಸೌಲಭ್ಯಗಳು ಈಗ ಸಾಲದೆನ್ನುವ ಕಾಲದಲ್ಲಿ , ಆಡಳಿತ ಸುಧಾರಣೆ ಎನ್ನುವ ಕಾಲದಲ್ಲಿ  ಈಗಲೂ ಇಂತಹದ್ದೊಂದು ಮನೆ ಇದೆಯೇ ಎಂಬ ಪ್ರಶ್ನೆ ಮೂಡುತ್ತದೆ.

ಸುಳ್ಯ ತಾಲೂಕಿನ ಮಂಡೆಕೋಲು ಬಳಿ ಒಂದು ಗುಡಿಸಲು ಇದೆ. ಪ್ಲಾಸ್ಟಿಕ್ ಹೊದಿಕೆ ಹಾಕಿದ, ಸರಿಯಾದ ನೆಲವೂ ಇಲ್ಲದ ಮನೆ ಇದೆ. ಈಗ ಯುವ ಬ್ರಿಗೆಡ್ ಇವರಿಗೊಂದು ಪುಟ್ಟ ಮನೆ ನಿರ್ಮಾಣಕ್ಕೆ ಮುಂದಾಗಿದೆ. ಆಡಳಿತ ವ್ಯವಸ್ಥೆಗೆ ಈಗಲಾದರೂ ಇದು ಕಾಣಬೇಕು…!

 

 

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಡಿವಾಳ ಮೂಲೆ ಎಂಬಲ್ಲಿ  ಪಕೀರ ಎಂಬವರ ಮನೆಯ ಕತೆ ಇದು. ಸಣ್ಣ ಕುಟುಂಬ ಇದು. ಪುಟ್ಟ ಪುಟ್ಟ ಮಕ್ಕಳೊಂದಿಗಿನ ಕುಟುಂಬ.  ದಿನವೂ ದುಡಿದು ಬದುಕು ಸಾಗಿಸುವ ವ್ಯವಸ್ಥೆ ಇವರದು. ಸ್ವಂತ ಜಾಗ ಇದೆ. ಸ್ಥಳೀಯರು ಕೊಡಮಾಡಿದ ಜಾಗ ಇದೆ. ಆದರೆ ರೇಶನ್ ಕಾರ್ಡ್, ಆಧಾರ್ ಕಾರ್ಡ್ ಸಹಿತ ಯಾವುದೇ ದಾಖಲೆ ಇಲ್ಲ. ಹೀಗಾಗಿ ಯಾವ ವ್ಯವಸ್ಥೆಯೂ ಇದುವರೆಗೆ ಆಗಿಲ್ಲ ಎನ್ನುವುದು  ಈಗಿನ ಮಾಹಿತಿ.

ಕಳೆದ ಅನೇಕ ವರಷಗಳಿಂದ ಇದೇ ಮನೆಯಲ್ಲಿ  ಅವರು ವಾಸ ಮಾಡುತ್ತಿದ್ದಾರೆ. ಮಳೆಗಾಲವಂತೂ ಇವರ ಬದುಕು ಅಯೋಮಯ. ವ್ಯವಸ್ಥೆಯ ಕಾರಣದಿಂದ  ಮಕ್ಕಳೂ ಶಾಲೆಗೂ ಹೋಗಲಾಗದೆ ಮನೆಯಲ್ಲೂ ಉಳಿದುಕೊಳ್ಳಲಾದರ ಸ್ಥಿತಿ ಇದೆ. ಚುನಾವಣೆ ಬಂದಾಗ ಇಲ್ಲಿನ ಎರಡು ಓಟಿಗಾಗಿ ಹೆಚ್ಚು ಗಮನವೂ  ಪಕ್ಷಗಳು ನೀಡದೇ ಇದ್ದರೆ ಪಕೀರ ಅವರ ಮದ್ಯಪಾನದ ಚಟವೂ ಅವರನ್ನು ದೂರ ಮಾಡಿದೆ. ಹೀಗಾಗಿ ಅವರ  ಮಕ್ಕಳೂ ದಿಕ್ಕಿಲ್ಲದಾಗಿದ್ದಾರೆ.

 

 

ಇದೀಗ ಯುವ ಬ್ರಿಗೇಟ್ ಈ ಕುಟುಂಬನ್ನು  ಗಮನಿಸಿ ಸಹಾಯಕ್ಕೆ ಮುಂದಾಗಿದೆ. ಪುಟ್ಟ ಮನೆಯನ್ನು  ದಾನಿಗಳ ಸಹಾಯದಿಂದ ನಿರ್ಮಾಣ ಮಾಡಲು ಮುಂದಾಗಿದೆ. ಭಾನುವಾರ ಮನೆಯನ್ನು  ಕಟ್ಟಿಕೊಡುವ ಕೆಲಸ ಮಾಡುತ್ತದೆ.

ಪಕೀರ ಕುಟುಂಬದ ಮಕ್ಕಳನ್ನು ಶಾಲೆಗೆ ಸೇರಿಸುವ ಪ್ರಯತ್ನ ಮಾಡುತ್ತಿದ್ದೇವೆ . ಅವರಿಗೆ ಓದಿನ ವ್ಯವಸ್ಥೆಗೆ ಮಾತುಕತೆ ನಡೆಯುತ್ತದೆ ಎನ್ನುತ್ತಾರೆ ಯುವಬ್ರಿಗೆಡ್ ಮುಂದಾಳು ಶರತ್.   ಈ ಮೂಲಕ ಪಕೀರ ಕುಟುಂಬಕ್ಕೆ ಆಧಾರ ಸಿಗಲಿ. ಆಧಾರ್ ಕಾರ್ಡ್ ಇಲ್ಲದೇ ಇದ್ದರೂ ಈಗ ಬದುಕಿಗೆ ಆಧಾರ ಸಿಗುವಂತಾಗಲಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

2 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago