Advertisement
ಸುದ್ದಿಗಳು

ಗುಡಿಸಲೂ ಅಲ್ಲದ ಮನೆಯ ಕತೆ ಇದು…!

Share

ಸುಳ್ಯ: ಇದು ಗುಡಿಸಲೂ ಅಲ್ಲದ ಮನೆಯೊಂದರ ಕತೆ. ಅಚ್ಚರಿಯಾಗುತ್ತದೆ, ಆಧುನಿಕ ಎಲ್ಲಾ ಸೌಲಭ್ಯಗಳು ಈಗ ಸಾಲದೆನ್ನುವ ಕಾಲದಲ್ಲಿ , ಆಡಳಿತ ಸುಧಾರಣೆ ಎನ್ನುವ ಕಾಲದಲ್ಲಿ  ಈಗಲೂ ಇಂತಹದ್ದೊಂದು ಮನೆ ಇದೆಯೇ ಎಂಬ ಪ್ರಶ್ನೆ ಮೂಡುತ್ತದೆ.

ಸುಳ್ಯ ತಾಲೂಕಿನ ಮಂಡೆಕೋಲು ಬಳಿ ಒಂದು ಗುಡಿಸಲು ಇದೆ. ಪ್ಲಾಸ್ಟಿಕ್ ಹೊದಿಕೆ ಹಾಕಿದ, ಸರಿಯಾದ ನೆಲವೂ ಇಲ್ಲದ ಮನೆ ಇದೆ. ಈಗ ಯುವ ಬ್ರಿಗೆಡ್ ಇವರಿಗೊಂದು ಪುಟ್ಟ ಮನೆ ನಿರ್ಮಾಣಕ್ಕೆ ಮುಂದಾಗಿದೆ. ಆಡಳಿತ ವ್ಯವಸ್ಥೆಗೆ ಈಗಲಾದರೂ ಇದು ಕಾಣಬೇಕು…!

 

 

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಡಿವಾಳ ಮೂಲೆ ಎಂಬಲ್ಲಿ  ಪಕೀರ ಎಂಬವರ ಮನೆಯ ಕತೆ ಇದು. ಸಣ್ಣ ಕುಟುಂಬ ಇದು. ಪುಟ್ಟ ಪುಟ್ಟ ಮಕ್ಕಳೊಂದಿಗಿನ ಕುಟುಂಬ.  ದಿನವೂ ದುಡಿದು ಬದುಕು ಸಾಗಿಸುವ ವ್ಯವಸ್ಥೆ ಇವರದು. ಸ್ವಂತ ಜಾಗ ಇದೆ. ಸ್ಥಳೀಯರು ಕೊಡಮಾಡಿದ ಜಾಗ ಇದೆ. ಆದರೆ ರೇಶನ್ ಕಾರ್ಡ್, ಆಧಾರ್ ಕಾರ್ಡ್ ಸಹಿತ ಯಾವುದೇ ದಾಖಲೆ ಇಲ್ಲ. ಹೀಗಾಗಿ ಯಾವ ವ್ಯವಸ್ಥೆಯೂ ಇದುವರೆಗೆ ಆಗಿಲ್ಲ ಎನ್ನುವುದು  ಈಗಿನ ಮಾಹಿತಿ.

ಕಳೆದ ಅನೇಕ ವರಷಗಳಿಂದ ಇದೇ ಮನೆಯಲ್ಲಿ  ಅವರು ವಾಸ ಮಾಡುತ್ತಿದ್ದಾರೆ. ಮಳೆಗಾಲವಂತೂ ಇವರ ಬದುಕು ಅಯೋಮಯ. ವ್ಯವಸ್ಥೆಯ ಕಾರಣದಿಂದ  ಮಕ್ಕಳೂ ಶಾಲೆಗೂ ಹೋಗಲಾಗದೆ ಮನೆಯಲ್ಲೂ ಉಳಿದುಕೊಳ್ಳಲಾದರ ಸ್ಥಿತಿ ಇದೆ. ಚುನಾವಣೆ ಬಂದಾಗ ಇಲ್ಲಿನ ಎರಡು ಓಟಿಗಾಗಿ ಹೆಚ್ಚು ಗಮನವೂ  ಪಕ್ಷಗಳು ನೀಡದೇ ಇದ್ದರೆ ಪಕೀರ ಅವರ ಮದ್ಯಪಾನದ ಚಟವೂ ಅವರನ್ನು ದೂರ ಮಾಡಿದೆ. ಹೀಗಾಗಿ ಅವರ  ಮಕ್ಕಳೂ ದಿಕ್ಕಿಲ್ಲದಾಗಿದ್ದಾರೆ.

 

 

ಇದೀಗ ಯುವ ಬ್ರಿಗೇಟ್ ಈ ಕುಟುಂಬನ್ನು  ಗಮನಿಸಿ ಸಹಾಯಕ್ಕೆ ಮುಂದಾಗಿದೆ. ಪುಟ್ಟ ಮನೆಯನ್ನು  ದಾನಿಗಳ ಸಹಾಯದಿಂದ ನಿರ್ಮಾಣ ಮಾಡಲು ಮುಂದಾಗಿದೆ. ಭಾನುವಾರ ಮನೆಯನ್ನು  ಕಟ್ಟಿಕೊಡುವ ಕೆಲಸ ಮಾಡುತ್ತದೆ.

ಪಕೀರ ಕುಟುಂಬದ ಮಕ್ಕಳನ್ನು ಶಾಲೆಗೆ ಸೇರಿಸುವ ಪ್ರಯತ್ನ ಮಾಡುತ್ತಿದ್ದೇವೆ . ಅವರಿಗೆ ಓದಿನ ವ್ಯವಸ್ಥೆಗೆ ಮಾತುಕತೆ ನಡೆಯುತ್ತದೆ ಎನ್ನುತ್ತಾರೆ ಯುವಬ್ರಿಗೆಡ್ ಮುಂದಾಳು ಶರತ್.   ಈ ಮೂಲಕ ಪಕೀರ ಕುಟುಂಬಕ್ಕೆ ಆಧಾರ ಸಿಗಲಿ. ಆಧಾರ್ ಕಾರ್ಡ್ ಇಲ್ಲದೇ ಇದ್ದರೂ ಈಗ ಬದುಕಿಗೆ ಆಧಾರ ಸಿಗುವಂತಾಗಲಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

11 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

11 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago