ಸುಳ್ಯ: ಇದು ಗುಡಿಸಲೂ ಅಲ್ಲದ ಮನೆಯೊಂದರ ಕತೆ. ಅಚ್ಚರಿಯಾಗುತ್ತದೆ, ಆಧುನಿಕ ಎಲ್ಲಾ ಸೌಲಭ್ಯಗಳು ಈಗ ಸಾಲದೆನ್ನುವ ಕಾಲದಲ್ಲಿ , ಆಡಳಿತ ಸುಧಾರಣೆ ಎನ್ನುವ ಕಾಲದಲ್ಲಿ ಈಗಲೂ ಇಂತಹದ್ದೊಂದು ಮನೆ ಇದೆಯೇ ಎಂಬ ಪ್ರಶ್ನೆ ಮೂಡುತ್ತದೆ.
ಸುಳ್ಯ ತಾಲೂಕಿನ ಮಂಡೆಕೋಲು ಬಳಿ ಒಂದು ಗುಡಿಸಲು ಇದೆ. ಪ್ಲಾಸ್ಟಿಕ್ ಹೊದಿಕೆ ಹಾಕಿದ, ಸರಿಯಾದ ನೆಲವೂ ಇಲ್ಲದ ಮನೆ ಇದೆ. ಈಗ ಯುವ ಬ್ರಿಗೆಡ್ ಇವರಿಗೊಂದು ಪುಟ್ಟ ಮನೆ ನಿರ್ಮಾಣಕ್ಕೆ ಮುಂದಾಗಿದೆ. ಆಡಳಿತ ವ್ಯವಸ್ಥೆಗೆ ಈಗಲಾದರೂ ಇದು ಕಾಣಬೇಕು…!
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಡಿವಾಳ ಮೂಲೆ ಎಂಬಲ್ಲಿ ಪಕೀರ ಎಂಬವರ ಮನೆಯ ಕತೆ ಇದು. ಸಣ್ಣ ಕುಟುಂಬ ಇದು. ಪುಟ್ಟ ಪುಟ್ಟ ಮಕ್ಕಳೊಂದಿಗಿನ ಕುಟುಂಬ. ದಿನವೂ ದುಡಿದು ಬದುಕು ಸಾಗಿಸುವ ವ್ಯವಸ್ಥೆ ಇವರದು. ಸ್ವಂತ ಜಾಗ ಇದೆ. ಸ್ಥಳೀಯರು ಕೊಡಮಾಡಿದ ಜಾಗ ಇದೆ. ಆದರೆ ರೇಶನ್ ಕಾರ್ಡ್, ಆಧಾರ್ ಕಾರ್ಡ್ ಸಹಿತ ಯಾವುದೇ ದಾಖಲೆ ಇಲ್ಲ. ಹೀಗಾಗಿ ಯಾವ ವ್ಯವಸ್ಥೆಯೂ ಇದುವರೆಗೆ ಆಗಿಲ್ಲ ಎನ್ನುವುದು ಈಗಿನ ಮಾಹಿತಿ.
ಕಳೆದ ಅನೇಕ ವರಷಗಳಿಂದ ಇದೇ ಮನೆಯಲ್ಲಿ ಅವರು ವಾಸ ಮಾಡುತ್ತಿದ್ದಾರೆ. ಮಳೆಗಾಲವಂತೂ ಇವರ ಬದುಕು ಅಯೋಮಯ. ವ್ಯವಸ್ಥೆಯ ಕಾರಣದಿಂದ ಮಕ್ಕಳೂ ಶಾಲೆಗೂ ಹೋಗಲಾಗದೆ ಮನೆಯಲ್ಲೂ ಉಳಿದುಕೊಳ್ಳಲಾದರ ಸ್ಥಿತಿ ಇದೆ. ಚುನಾವಣೆ ಬಂದಾಗ ಇಲ್ಲಿನ ಎರಡು ಓಟಿಗಾಗಿ ಹೆಚ್ಚು ಗಮನವೂ ಪಕ್ಷಗಳು ನೀಡದೇ ಇದ್ದರೆ ಪಕೀರ ಅವರ ಮದ್ಯಪಾನದ ಚಟವೂ ಅವರನ್ನು ದೂರ ಮಾಡಿದೆ. ಹೀಗಾಗಿ ಅವರ ಮಕ್ಕಳೂ ದಿಕ್ಕಿಲ್ಲದಾಗಿದ್ದಾರೆ.
ಇದೀಗ ಯುವ ಬ್ರಿಗೇಟ್ ಈ ಕುಟುಂಬನ್ನು ಗಮನಿಸಿ ಸಹಾಯಕ್ಕೆ ಮುಂದಾಗಿದೆ. ಪುಟ್ಟ ಮನೆಯನ್ನು ದಾನಿಗಳ ಸಹಾಯದಿಂದ ನಿರ್ಮಾಣ ಮಾಡಲು ಮುಂದಾಗಿದೆ. ಭಾನುವಾರ ಮನೆಯನ್ನು ಕಟ್ಟಿಕೊಡುವ ಕೆಲಸ ಮಾಡುತ್ತದೆ.
ಪಕೀರ ಕುಟುಂಬದ ಮಕ್ಕಳನ್ನು ಶಾಲೆಗೆ ಸೇರಿಸುವ ಪ್ರಯತ್ನ ಮಾಡುತ್ತಿದ್ದೇವೆ . ಅವರಿಗೆ ಓದಿನ ವ್ಯವಸ್ಥೆಗೆ ಮಾತುಕತೆ ನಡೆಯುತ್ತದೆ ಎನ್ನುತ್ತಾರೆ ಯುವಬ್ರಿಗೆಡ್ ಮುಂದಾಳು ಶರತ್. ಈ ಮೂಲಕ ಪಕೀರ ಕುಟುಂಬಕ್ಕೆ ಆಧಾರ ಸಿಗಲಿ. ಆಧಾರ್ ಕಾರ್ಡ್ ಇಲ್ಲದೇ ಇದ್ದರೂ ಈಗ ಬದುಕಿಗೆ ಆಧಾರ ಸಿಗುವಂತಾಗಲಿ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…