Advertisement
ಸುದ್ದಿಗಳು

ಗುಡಿಸಲೂ ಅಲ್ಲದ ಮನೆಯ ಕತೆ ಇದು…!

Share

ಸುಳ್ಯ: ಇದು ಗುಡಿಸಲೂ ಅಲ್ಲದ ಮನೆಯೊಂದರ ಕತೆ. ಅಚ್ಚರಿಯಾಗುತ್ತದೆ, ಆಧುನಿಕ ಎಲ್ಲಾ ಸೌಲಭ್ಯಗಳು ಈಗ ಸಾಲದೆನ್ನುವ ಕಾಲದಲ್ಲಿ , ಆಡಳಿತ ಸುಧಾರಣೆ ಎನ್ನುವ ಕಾಲದಲ್ಲಿ  ಈಗಲೂ ಇಂತಹದ್ದೊಂದು ಮನೆ ಇದೆಯೇ ಎಂಬ ಪ್ರಶ್ನೆ ಮೂಡುತ್ತದೆ.

ಸುಳ್ಯ ತಾಲೂಕಿನ ಮಂಡೆಕೋಲು ಬಳಿ ಒಂದು ಗುಡಿಸಲು ಇದೆ. ಪ್ಲಾಸ್ಟಿಕ್ ಹೊದಿಕೆ ಹಾಕಿದ, ಸರಿಯಾದ ನೆಲವೂ ಇಲ್ಲದ ಮನೆ ಇದೆ. ಈಗ ಯುವ ಬ್ರಿಗೆಡ್ ಇವರಿಗೊಂದು ಪುಟ್ಟ ಮನೆ ನಿರ್ಮಾಣಕ್ಕೆ ಮುಂದಾಗಿದೆ. ಆಡಳಿತ ವ್ಯವಸ್ಥೆಗೆ ಈಗಲಾದರೂ ಇದು ಕಾಣಬೇಕು…!

 

 

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಡಿವಾಳ ಮೂಲೆ ಎಂಬಲ್ಲಿ  ಪಕೀರ ಎಂಬವರ ಮನೆಯ ಕತೆ ಇದು. ಸಣ್ಣ ಕುಟುಂಬ ಇದು. ಪುಟ್ಟ ಪುಟ್ಟ ಮಕ್ಕಳೊಂದಿಗಿನ ಕುಟುಂಬ.  ದಿನವೂ ದುಡಿದು ಬದುಕು ಸಾಗಿಸುವ ವ್ಯವಸ್ಥೆ ಇವರದು. ಸ್ವಂತ ಜಾಗ ಇದೆ. ಸ್ಥಳೀಯರು ಕೊಡಮಾಡಿದ ಜಾಗ ಇದೆ. ಆದರೆ ರೇಶನ್ ಕಾರ್ಡ್, ಆಧಾರ್ ಕಾರ್ಡ್ ಸಹಿತ ಯಾವುದೇ ದಾಖಲೆ ಇಲ್ಲ. ಹೀಗಾಗಿ ಯಾವ ವ್ಯವಸ್ಥೆಯೂ ಇದುವರೆಗೆ ಆಗಿಲ್ಲ ಎನ್ನುವುದು  ಈಗಿನ ಮಾಹಿತಿ.

ಕಳೆದ ಅನೇಕ ವರಷಗಳಿಂದ ಇದೇ ಮನೆಯಲ್ಲಿ  ಅವರು ವಾಸ ಮಾಡುತ್ತಿದ್ದಾರೆ. ಮಳೆಗಾಲವಂತೂ ಇವರ ಬದುಕು ಅಯೋಮಯ. ವ್ಯವಸ್ಥೆಯ ಕಾರಣದಿಂದ  ಮಕ್ಕಳೂ ಶಾಲೆಗೂ ಹೋಗಲಾಗದೆ ಮನೆಯಲ್ಲೂ ಉಳಿದುಕೊಳ್ಳಲಾದರ ಸ್ಥಿತಿ ಇದೆ. ಚುನಾವಣೆ ಬಂದಾಗ ಇಲ್ಲಿನ ಎರಡು ಓಟಿಗಾಗಿ ಹೆಚ್ಚು ಗಮನವೂ  ಪಕ್ಷಗಳು ನೀಡದೇ ಇದ್ದರೆ ಪಕೀರ ಅವರ ಮದ್ಯಪಾನದ ಚಟವೂ ಅವರನ್ನು ದೂರ ಮಾಡಿದೆ. ಹೀಗಾಗಿ ಅವರ  ಮಕ್ಕಳೂ ದಿಕ್ಕಿಲ್ಲದಾಗಿದ್ದಾರೆ.

 

 

ಇದೀಗ ಯುವ ಬ್ರಿಗೇಟ್ ಈ ಕುಟುಂಬನ್ನು  ಗಮನಿಸಿ ಸಹಾಯಕ್ಕೆ ಮುಂದಾಗಿದೆ. ಪುಟ್ಟ ಮನೆಯನ್ನು  ದಾನಿಗಳ ಸಹಾಯದಿಂದ ನಿರ್ಮಾಣ ಮಾಡಲು ಮುಂದಾಗಿದೆ. ಭಾನುವಾರ ಮನೆಯನ್ನು  ಕಟ್ಟಿಕೊಡುವ ಕೆಲಸ ಮಾಡುತ್ತದೆ.

ಪಕೀರ ಕುಟುಂಬದ ಮಕ್ಕಳನ್ನು ಶಾಲೆಗೆ ಸೇರಿಸುವ ಪ್ರಯತ್ನ ಮಾಡುತ್ತಿದ್ದೇವೆ . ಅವರಿಗೆ ಓದಿನ ವ್ಯವಸ್ಥೆಗೆ ಮಾತುಕತೆ ನಡೆಯುತ್ತದೆ ಎನ್ನುತ್ತಾರೆ ಯುವಬ್ರಿಗೆಡ್ ಮುಂದಾಳು ಶರತ್.   ಈ ಮೂಲಕ ಪಕೀರ ಕುಟುಂಬಕ್ಕೆ ಆಧಾರ ಸಿಗಲಿ. ಆಧಾರ್ ಕಾರ್ಡ್ ಇಲ್ಲದೇ ಇದ್ದರೂ ಈಗ ಬದುಕಿಗೆ ಆಧಾರ ಸಿಗುವಂತಾಗಲಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago