Advertisement
ಸುದ್ದಿಗಳು

ಗುಡಿಸಲೂ ಅಲ್ಲದ ಮನೆಯ ಕತೆ ಇದು…!

Share

ಸುಳ್ಯ: ಇದು ಗುಡಿಸಲೂ ಅಲ್ಲದ ಮನೆಯೊಂದರ ಕತೆ. ಅಚ್ಚರಿಯಾಗುತ್ತದೆ, ಆಧುನಿಕ ಎಲ್ಲಾ ಸೌಲಭ್ಯಗಳು ಈಗ ಸಾಲದೆನ್ನುವ ಕಾಲದಲ್ಲಿ , ಆಡಳಿತ ಸುಧಾರಣೆ ಎನ್ನುವ ಕಾಲದಲ್ಲಿ  ಈಗಲೂ ಇಂತಹದ್ದೊಂದು ಮನೆ ಇದೆಯೇ ಎಂಬ ಪ್ರಶ್ನೆ ಮೂಡುತ್ತದೆ.

ಸುಳ್ಯ ತಾಲೂಕಿನ ಮಂಡೆಕೋಲು ಬಳಿ ಒಂದು ಗುಡಿಸಲು ಇದೆ. ಪ್ಲಾಸ್ಟಿಕ್ ಹೊದಿಕೆ ಹಾಕಿದ, ಸರಿಯಾದ ನೆಲವೂ ಇಲ್ಲದ ಮನೆ ಇದೆ. ಈಗ ಯುವ ಬ್ರಿಗೆಡ್ ಇವರಿಗೊಂದು ಪುಟ್ಟ ಮನೆ ನಿರ್ಮಾಣಕ್ಕೆ ಮುಂದಾಗಿದೆ. ಆಡಳಿತ ವ್ಯವಸ್ಥೆಗೆ ಈಗಲಾದರೂ ಇದು ಕಾಣಬೇಕು…!

 

 

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಡಿವಾಳ ಮೂಲೆ ಎಂಬಲ್ಲಿ  ಪಕೀರ ಎಂಬವರ ಮನೆಯ ಕತೆ ಇದು. ಸಣ್ಣ ಕುಟುಂಬ ಇದು. ಪುಟ್ಟ ಪುಟ್ಟ ಮಕ್ಕಳೊಂದಿಗಿನ ಕುಟುಂಬ.  ದಿನವೂ ದುಡಿದು ಬದುಕು ಸಾಗಿಸುವ ವ್ಯವಸ್ಥೆ ಇವರದು. ಸ್ವಂತ ಜಾಗ ಇದೆ. ಸ್ಥಳೀಯರು ಕೊಡಮಾಡಿದ ಜಾಗ ಇದೆ. ಆದರೆ ರೇಶನ್ ಕಾರ್ಡ್, ಆಧಾರ್ ಕಾರ್ಡ್ ಸಹಿತ ಯಾವುದೇ ದಾಖಲೆ ಇಲ್ಲ. ಹೀಗಾಗಿ ಯಾವ ವ್ಯವಸ್ಥೆಯೂ ಇದುವರೆಗೆ ಆಗಿಲ್ಲ ಎನ್ನುವುದು  ಈಗಿನ ಮಾಹಿತಿ.

ಕಳೆದ ಅನೇಕ ವರಷಗಳಿಂದ ಇದೇ ಮನೆಯಲ್ಲಿ  ಅವರು ವಾಸ ಮಾಡುತ್ತಿದ್ದಾರೆ. ಮಳೆಗಾಲವಂತೂ ಇವರ ಬದುಕು ಅಯೋಮಯ. ವ್ಯವಸ್ಥೆಯ ಕಾರಣದಿಂದ  ಮಕ್ಕಳೂ ಶಾಲೆಗೂ ಹೋಗಲಾಗದೆ ಮನೆಯಲ್ಲೂ ಉಳಿದುಕೊಳ್ಳಲಾದರ ಸ್ಥಿತಿ ಇದೆ. ಚುನಾವಣೆ ಬಂದಾಗ ಇಲ್ಲಿನ ಎರಡು ಓಟಿಗಾಗಿ ಹೆಚ್ಚು ಗಮನವೂ  ಪಕ್ಷಗಳು ನೀಡದೇ ಇದ್ದರೆ ಪಕೀರ ಅವರ ಮದ್ಯಪಾನದ ಚಟವೂ ಅವರನ್ನು ದೂರ ಮಾಡಿದೆ. ಹೀಗಾಗಿ ಅವರ  ಮಕ್ಕಳೂ ದಿಕ್ಕಿಲ್ಲದಾಗಿದ್ದಾರೆ.

 

 

ಇದೀಗ ಯುವ ಬ್ರಿಗೇಟ್ ಈ ಕುಟುಂಬನ್ನು  ಗಮನಿಸಿ ಸಹಾಯಕ್ಕೆ ಮುಂದಾಗಿದೆ. ಪುಟ್ಟ ಮನೆಯನ್ನು  ದಾನಿಗಳ ಸಹಾಯದಿಂದ ನಿರ್ಮಾಣ ಮಾಡಲು ಮುಂದಾಗಿದೆ. ಭಾನುವಾರ ಮನೆಯನ್ನು  ಕಟ್ಟಿಕೊಡುವ ಕೆಲಸ ಮಾಡುತ್ತದೆ.

ಪಕೀರ ಕುಟುಂಬದ ಮಕ್ಕಳನ್ನು ಶಾಲೆಗೆ ಸೇರಿಸುವ ಪ್ರಯತ್ನ ಮಾಡುತ್ತಿದ್ದೇವೆ . ಅವರಿಗೆ ಓದಿನ ವ್ಯವಸ್ಥೆಗೆ ಮಾತುಕತೆ ನಡೆಯುತ್ತದೆ ಎನ್ನುತ್ತಾರೆ ಯುವಬ್ರಿಗೆಡ್ ಮುಂದಾಳು ಶರತ್.   ಈ ಮೂಲಕ ಪಕೀರ ಕುಟುಂಬಕ್ಕೆ ಆಧಾರ ಸಿಗಲಿ. ಆಧಾರ್ ಕಾರ್ಡ್ ಇಲ್ಲದೇ ಇದ್ದರೂ ಈಗ ಬದುಕಿಗೆ ಆಧಾರ ಸಿಗುವಂತಾಗಲಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

4 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

14 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

20 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago