ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ

September 25, 2019
3:31 PM

ಪುತ್ತೂರು: ಸರಸ್ವತಿ ಕಾನೂನು ಕಾಲೇಜು ಚಿತ್ರದುರ್ಗದಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟ ಸ್ಪರ್ಧೆ ಹಾಗೂ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು. ಇದರಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜು ವಿದ್ಯಾಲಯದ ವಿದ್ಯಾರ್ಥಿನಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

ಈ ತಂಡದಲ್ಲಿ ಸಂಧ್ಯಾ ಕೆ.ಎಸ್. ತೃತೀಯ ಎಲ್.ಎಲ್.ಬಿ., ಲವೀನ ತೃತೀಯ ಬಿ.ಎ.ಎಲ್.ಎಲ್.ಬಿ., ಪೂರ್ಣಿಮಾ ತೃತೀಯ ಬಿ.ಎ.ಎಲ್.ಎಲ್.ಬಿ., ಹರ್ಷಿತಾ ತೃತೀಯ ಎಲ್.ಎಲ್.ಬಿ., ಜ್ಯೋತಿ ದ್ವಿತೀಯ ಎಲ್.ಎಲ್.ಬಿ. ಹಾಗೂ ಅರ್ಪಿತ ಪ್ರಶಾಂತ್ ಪ್ರಥಮ ಬಿ.ಎ.ಎಲ್.ಎಲ್.ಬಿ. ಇವರು ಭಾಗವಹಿಸಿದ್ದರು.
ಸಂಧ್ಯಾ ಕೆ.ಎಸ್. ತೃತೀಯ ಎಲ್.ಎಲ್.ಬಿ. ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ವಿಶ್ವವಿದ್ಯಾನಿಲಯದ ತಂಡಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಆಂದ್ರಪ್ರದೇಶ ಅಂತರ್ ವಿಶ್ವ ವಿದ್ಯಾನಿಲಯದ ಗುಡ್ಡಗಾಡು ಓಟದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ನವೀನ್ ಕುಮಾರ್ ಎಮ್.ಕೆ. ದೈಹಿಕ ಶಿಕ್ಷಕರು ತರಬೇತಿಯನ್ನು ನೀಡಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror