ವೈರಲ್ ಸುದ್ದಿ

ಗುಡ್ಡದ ಮೇಲೆ ನೀರು ಹಿಡಿದಿಡುವುದು – ತುಂಬುವುದರ ಬಗ್ಗೆ ಒಂದು ಸಂದೇಹ…..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಗುಡ್ಡದ ಮೇಲೆ ನೀರು ಹಿಡಿದಿಡುವುದು  ಹಾಗೂ ತುಂಬುವುದರ ಬಗ್ಗೆ ಸುಳ್ಯ ತಾಲೂಕಿನ ಕಲ್ಮಡ್ಕದ ಕೃಷಿಕ ಸುರೇಶ್ಚಂದ್ರ  ಸಂದೇಹವೊಂದನ್ನು ಮುಂದಿಟ್ಟಿದ್ದಾರೆ. ಅವರ ಸಂದೇಹ ಹಲವರ ಸಂದೇಹ, ಪ್ರಶ್ನೆಯೂ ಆಗಿದೆ. ಹೀಗಾಗಿ ಸುರೇಶ್ಚಂದ್ರ ಅವರ ಬರಹ ಯಥಾವತ್ತಾಗಿ ಇಲ್ಲಿದೆ….

ಹಾಗೇ ಸುಮ್ಮನೆ,  ಮನಸಿನಲ್ಲೊಂದು ಹಾದು ಹೋದ ಯೋಚನೆ ,ಹಂಚಿಕೊಳ್ಳೋಣವೆಂದು ಕಂಡಾಗ ಬರಹ ಮೂಲಕ ಪ್ರಸ್ತಾವನೆ ಅಷ್ಟೇ. ನಮ್ಮ ದ.ಕ ದ ಪರಿಸ್ಥಿತಿಯಲ್ಲಿ ಮಳೆಗಾಲದ ಮಳೆ ನೀರನ್ನು ಇಂಗಿಸಲು ಹೊರಟರೆ ಅನಾಹುತಗಳಾಗಬಹುದೋ ಎಂದು ಮನಸ್ಸಿನಲ್ಲಿ ಮೂಡಿದ ಬಾವ. ಖಂಡಿತಾ ಋಣಾತ್ಮಕ ವಿಚಾರವಲ್ಲ. ಅರಿತವರು ಈ ಬಗ್ಗೆ ತಿದ್ದುವ ಸದಾವಕಾಶ ಇದ್ದೇ ಇದೆ.
   ಕಳೆದ ವರ್ಷ ಮಡಿಕೇರಿ, ವಯನಾಡ್, ಈಗ ಬೆಳ್ತಂಗಡಿಯ ಘಟ್ಟದ ತಪ್ಪಲಿನ ಗುಡ್ಡಗಳು,ಚಿಕ್ಕಮಗಳೂರು ಪರ್ವತ ಶ್ರೇಣಿಗಳು ಕುಸಿಯುವುದು.. …. ಜಾರುತ್ತಿರುವುದು ತುಂಬಾ ಆಲೋಚಿಸಬೇಕಾದ ವಿಚಾರವಲ್ಲವೇ.
ಈ ಹಿನ್ನೆಲೆಯಲ್ಲಿ ಮನಸ್ಸೋಡಿದಾಗ,ನಮ್ಮ ಊರುಗಳಲ್ಲಿ ನಾವು ಗುಡ್ಡಗಳಲ್ಲಿ,ಇಳಿಜಾರುಗಳಲ್ಲಿ ನೀರು ಇಂಗಿಸುವ ಪ್ರಕ್ರಿಯೆ ನಮಗೂ ಮುಂದೊಂದು ದಿನ ಈ ಪರಿಸ್ಥಿತಿ ತಂದಿಡಬಹುದೇ ಎಂದು ಸಣ್ಣ ಹೆದರಿಕೆ ಮೂಡುತ್ತಿದೆ.
 ಪ್ರಾಕೃತಿಕ ವ್ಯವಸ್ಥೆಯಂತೆ ಭುವಿಯೊಳಗೆ ನೀರಿಂಗುವುದು,ಒರತೆಗಳಾಗುವುದು…ಮುಂತಾದ ಪ್ರಕೃತಿಗೆ ಅದರದ್ದೇ ಆದ ಲೆಕ್ಕಾಚಾರಗಳಿರಬಹುದು. ನಾವು ಗುಡ್ಡದ ಮೇಲೆಲ್ಲಾ ನೀರನ್ನು ಹಿಡಿದಿಟ್ಟಾಗ  ಅದು ಆ ಪ್ರಾಕೃತಿಕ ಲೆಕ್ಕಾಚಾರಕ್ಕೆ ವಿರುದ್ದವಾಗದೇ ?  ಉದಾಹರಣೆಗೆ ನಾವು ಬಾಯಾರಿದಾಗ ಒಂದು ತಪ್ಪಿದರೆ ಎರಡು ಲೋಟ ನೀರು ಕುಡಿಯಬಹುದು,ಅದೇ ಏಳೆಂಟು ಲೋಟ ಕುಡಿದರೆ ಹೊಟ್ಟೆಯೊಳಗೆ ಅಲ್ಲೋಲ ಕಲ್ಲೋಲವಾಗುತ್ತದಲ್ಲವೇ….ಅದೇ ರೀತಿ ಭೂಮಿಗೂ ಆಗದೇ. ಭೂಮಿಯ ಮಣ್ಣಿನ ರಚನೆ ಪದರು ಪದರಾಗಿ ಕೊನೆಗೆ ಕಲ್ಲಿನ ಮೇಲೆ ನಿಂತಿರುವುದಂತೆ, ಈ ನೀರು ತುಂಬಿ ಮೆತ್ತಗಾದ,ಉಬ್ಬಿದ ಮಣ್ಣು ಈ ಕಲ್ಲಿನ ಪದರದಿಂದ ಜಾರಿಬಿಡಬಹುದೇ…ಯಾಕೆಂದರೆ…. ನಮ್ಮೂರು ಕಲ್ಮಡ್ಕದಲ್ಲಿ ಮಣ್ಣಿನ ಪದರ ಎಪ್ಪತ್ತೈದರಿಂದ ನೂರಿಪ್ಪತ್ತು ಫೀಟ್ ತನಕವಿದೆ….ಇಂತಲ್ಲಿ ಅಷ್ಟು ಸಮಸ್ಯೆ ಆಗದೋ ಏನೋ…ಅದೇ ಕೆಲವು ಪ್ರದೇಶಗಳಲ್ಲಿ ಇಪ್ಪತೈದು ಫೀಟ್ ಗಿಂತ ಕಡಿಮೆ ಮಣ್ಣಿನ ಪದರವಿರುವಲ್ಲಿ ಜಾರುವ ಸಂಭವ ಹೆಚ್ಚಾಗಬಹುದೇ ಎಂದು ಮನಸ್ಸಿಗೆ ಬರುವ ಪ್ರಶ್ನೆ. ಎಲ್ಲೋ ಹಾರಂಗಿ ಅಣೆಕಟ್ಟೆಯ ನೀರೊತ್ತಡ,ಎತ್ತಿನಹೊಳೆಗಾಗಿ ಕಡಿದ ಭೂಭಾಗಗಳಲ್ಲಿ ಒಳ ಸೇರಿದ ನೀರು ಎಲ್ಲೆಲ್ಲೋ ಹೋಗಿ ಇಡೀ ಭೂಪದರ ಕುಸಿಯಲು ಕಾರಣವಾಗುತ್ತಿದೆ ಎಂದಾದರೆ ಇದೂ ಆಲೋಚಿಸಬೇಕಾದ ವಿಚಾರವಲ್ಲವೇ.
 ಹಾಗಾದರೆ ಬೇಸಿಗೆಯ ನೀರ ಕೊರತೆಗೆ ಏನು ಮಾಡಬಹುದು ಎಂದರೆ ಉತ್ತರ ನನ್ನಲ್ಲಿಲ್ಲ.ಒಟ್ಟಾರೆ ಪ್ರಕೃತಿಯ ಅತಿ ಶೋಷಣೆ ಇಂತಹ ದುರಂತಗಳಿಗೆ ಈ ಹಿಂದೆಯೂ ಮುಂದೆಯೂ ಕಾರಣವೇನೋ ಅನಿಸುತ್ತಿದೆ…ಹಿಂದೆ ಹುಲಿ ಮುಂದೆ ಝರಿ ಎಂಬ ಅಂಚಿಗೆ ನಾವೆಲ್ಲರೂ ಬಂದು ನಿಂತಿದ್ದೇವೇನೋ ಎಂದೆನಿಸುತ್ತಿದೆ..
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

5 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

21 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

21 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

21 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

21 hours ago