Advertisement
ವೈರಲ್ ಸುದ್ದಿ

ಗುಡ್ಡದ ಮೇಲೆ ನೀರು ಹಿಡಿದಿಡುವುದು – ತುಂಬುವುದರ ಬಗ್ಗೆ ಒಂದು ಸಂದೇಹ…..

Share
ಗುಡ್ಡದ ಮೇಲೆ ನೀರು ಹಿಡಿದಿಡುವುದು  ಹಾಗೂ ತುಂಬುವುದರ ಬಗ್ಗೆ ಸುಳ್ಯ ತಾಲೂಕಿನ ಕಲ್ಮಡ್ಕದ ಕೃಷಿಕ ಸುರೇಶ್ಚಂದ್ರ  ಸಂದೇಹವೊಂದನ್ನು ಮುಂದಿಟ್ಟಿದ್ದಾರೆ. ಅವರ ಸಂದೇಹ ಹಲವರ ಸಂದೇಹ, ಪ್ರಶ್ನೆಯೂ ಆಗಿದೆ. ಹೀಗಾಗಿ ಸುರೇಶ್ಚಂದ್ರ ಅವರ ಬರಹ ಯಥಾವತ್ತಾಗಿ ಇಲ್ಲಿದೆ….

ಹಾಗೇ ಸುಮ್ಮನೆ,  ಮನಸಿನಲ್ಲೊಂದು ಹಾದು ಹೋದ ಯೋಚನೆ ,ಹಂಚಿಕೊಳ್ಳೋಣವೆಂದು ಕಂಡಾಗ ಬರಹ ಮೂಲಕ ಪ್ರಸ್ತಾವನೆ ಅಷ್ಟೇ. ನಮ್ಮ ದ.ಕ ದ ಪರಿಸ್ಥಿತಿಯಲ್ಲಿ ಮಳೆಗಾಲದ ಮಳೆ ನೀರನ್ನು ಇಂಗಿಸಲು ಹೊರಟರೆ ಅನಾಹುತಗಳಾಗಬಹುದೋ ಎಂದು ಮನಸ್ಸಿನಲ್ಲಿ ಮೂಡಿದ ಬಾವ. ಖಂಡಿತಾ ಋಣಾತ್ಮಕ ವಿಚಾರವಲ್ಲ. ಅರಿತವರು ಈ ಬಗ್ಗೆ ತಿದ್ದುವ ಸದಾವಕಾಶ ಇದ್ದೇ ಇದೆ.
   ಕಳೆದ ವರ್ಷ ಮಡಿಕೇರಿ, ವಯನಾಡ್, ಈಗ ಬೆಳ್ತಂಗಡಿಯ ಘಟ್ಟದ ತಪ್ಪಲಿನ ಗುಡ್ಡಗಳು,ಚಿಕ್ಕಮಗಳೂರು ಪರ್ವತ ಶ್ರೇಣಿಗಳು ಕುಸಿಯುವುದು.. …. ಜಾರುತ್ತಿರುವುದು ತುಂಬಾ ಆಲೋಚಿಸಬೇಕಾದ ವಿಚಾರವಲ್ಲವೇ.
ಈ ಹಿನ್ನೆಲೆಯಲ್ಲಿ ಮನಸ್ಸೋಡಿದಾಗ,ನಮ್ಮ ಊರುಗಳಲ್ಲಿ ನಾವು ಗುಡ್ಡಗಳಲ್ಲಿ,ಇಳಿಜಾರುಗಳಲ್ಲಿ ನೀರು ಇಂಗಿಸುವ ಪ್ರಕ್ರಿಯೆ ನಮಗೂ ಮುಂದೊಂದು ದಿನ ಈ ಪರಿಸ್ಥಿತಿ ತಂದಿಡಬಹುದೇ ಎಂದು ಸಣ್ಣ ಹೆದರಿಕೆ ಮೂಡುತ್ತಿದೆ.
 ಪ್ರಾಕೃತಿಕ ವ್ಯವಸ್ಥೆಯಂತೆ ಭುವಿಯೊಳಗೆ ನೀರಿಂಗುವುದು,ಒರತೆಗಳಾಗುವುದು…ಮುಂತಾದ ಪ್ರಕೃತಿಗೆ ಅದರದ್ದೇ ಆದ ಲೆಕ್ಕಾಚಾರಗಳಿರಬಹುದು. ನಾವು ಗುಡ್ಡದ ಮೇಲೆಲ್ಲಾ ನೀರನ್ನು ಹಿಡಿದಿಟ್ಟಾಗ  ಅದು ಆ ಪ್ರಾಕೃತಿಕ ಲೆಕ್ಕಾಚಾರಕ್ಕೆ ವಿರುದ್ದವಾಗದೇ ?  ಉದಾಹರಣೆಗೆ ನಾವು ಬಾಯಾರಿದಾಗ ಒಂದು ತಪ್ಪಿದರೆ ಎರಡು ಲೋಟ ನೀರು ಕುಡಿಯಬಹುದು,ಅದೇ ಏಳೆಂಟು ಲೋಟ ಕುಡಿದರೆ ಹೊಟ್ಟೆಯೊಳಗೆ ಅಲ್ಲೋಲ ಕಲ್ಲೋಲವಾಗುತ್ತದಲ್ಲವೇ….ಅದೇ ರೀತಿ ಭೂಮಿಗೂ ಆಗದೇ. ಭೂಮಿಯ ಮಣ್ಣಿನ ರಚನೆ ಪದರು ಪದರಾಗಿ ಕೊನೆಗೆ ಕಲ್ಲಿನ ಮೇಲೆ ನಿಂತಿರುವುದಂತೆ, ಈ ನೀರು ತುಂಬಿ ಮೆತ್ತಗಾದ,ಉಬ್ಬಿದ ಮಣ್ಣು ಈ ಕಲ್ಲಿನ ಪದರದಿಂದ ಜಾರಿಬಿಡಬಹುದೇ…ಯಾಕೆಂದರೆ…. ನಮ್ಮೂರು ಕಲ್ಮಡ್ಕದಲ್ಲಿ ಮಣ್ಣಿನ ಪದರ ಎಪ್ಪತ್ತೈದರಿಂದ ನೂರಿಪ್ಪತ್ತು ಫೀಟ್ ತನಕವಿದೆ….ಇಂತಲ್ಲಿ ಅಷ್ಟು ಸಮಸ್ಯೆ ಆಗದೋ ಏನೋ…ಅದೇ ಕೆಲವು ಪ್ರದೇಶಗಳಲ್ಲಿ ಇಪ್ಪತೈದು ಫೀಟ್ ಗಿಂತ ಕಡಿಮೆ ಮಣ್ಣಿನ ಪದರವಿರುವಲ್ಲಿ ಜಾರುವ ಸಂಭವ ಹೆಚ್ಚಾಗಬಹುದೇ ಎಂದು ಮನಸ್ಸಿಗೆ ಬರುವ ಪ್ರಶ್ನೆ. ಎಲ್ಲೋ ಹಾರಂಗಿ ಅಣೆಕಟ್ಟೆಯ ನೀರೊತ್ತಡ,ಎತ್ತಿನಹೊಳೆಗಾಗಿ ಕಡಿದ ಭೂಭಾಗಗಳಲ್ಲಿ ಒಳ ಸೇರಿದ ನೀರು ಎಲ್ಲೆಲ್ಲೋ ಹೋಗಿ ಇಡೀ ಭೂಪದರ ಕುಸಿಯಲು ಕಾರಣವಾಗುತ್ತಿದೆ ಎಂದಾದರೆ ಇದೂ ಆಲೋಚಿಸಬೇಕಾದ ವಿಚಾರವಲ್ಲವೇ.
 ಹಾಗಾದರೆ ಬೇಸಿಗೆಯ ನೀರ ಕೊರತೆಗೆ ಏನು ಮಾಡಬಹುದು ಎಂದರೆ ಉತ್ತರ ನನ್ನಲ್ಲಿಲ್ಲ.ಒಟ್ಟಾರೆ ಪ್ರಕೃತಿಯ ಅತಿ ಶೋಷಣೆ ಇಂತಹ ದುರಂತಗಳಿಗೆ ಈ ಹಿಂದೆಯೂ ಮುಂದೆಯೂ ಕಾರಣವೇನೋ ಅನಿಸುತ್ತಿದೆ…ಹಿಂದೆ ಹುಲಿ ಮುಂದೆ ಝರಿ ಎಂಬ ಅಂಚಿಗೆ ನಾವೆಲ್ಲರೂ ಬಂದು ನಿಂತಿದ್ದೇವೇನೋ ಎಂದೆನಿಸುತ್ತಿದೆ..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

5 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

5 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

5 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

10 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago