ಗುಡ್ಡ ಕುಸಿದ ತೋರ ಗ್ರಾಮಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ : ಕೇಂದ್ರ ಸರಕಾರದಿಂದ ಅಗತ್ಯ ನೆರವು ನೀಡುವ ಭರವಸೆ

August 26, 2019
1:00 PM

ಮಡಿಕೇರಿ  :ಮಹಾಮಳೆಯ ಗುಡ್ಡ ಕುಸಿತದಿಂದ ಜೀವಹಾನಿಯಾದ ತೋರ ಗ್ರಾಮದ ಘಟನಾ ಸ್ಥಳಕ್ಕೆ ಸಂಸದ ಪ್ರತಾಪ ಸಿಂಹ ಅವರು ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು.

ಭೂ ಕುಸಿತದಿಂದ ಕುಟುಂಬದ ಸದಸ್ಯರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ ಪ್ರಭು ಕುಮಾರ್ ಭಟ್ ಮತ್ತು ಹರೀಶ್ ಅವರನ್ನು ಭೇಟಿಯಾಗಿ, ಸಾಂತ್ವನ ನುಡಿದ ಸಂಸದರು, ಇದೇ ಸಂದರ್ಭ ನಾಪತ್ತೆಯಾದವರ ಶೋಧ ಕಾರ್ಯಾಚರಣೆಯನ್ನು ವೀಕ್ಷಿಸಿ, ತಂಡದ ಮುಖ್ಯಸ್ಥರೊಂದಿಗೆ ಕಾರ್ಯಾಚರಣೆಯ ಮಾಹಿತಿ ಪಡೆದರು.

ಸೂರು ಒದಗಿಸುವ ಭರವಸೆ- ಪ್ರಾಕೃತಿಕ ವಿಕೋಪದಿಂದ ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಕೇಂದ್ರ ಸರಕಾರವು ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದ ಸಂಸದರು, ರಾಜ್ಯ ಸರಕಾರ ಸಂತ್ರಸ್ತರಿಗೆ ನೀಡಿದ ಪರಿಹಾರದೊಂದಿಗೆ ಕೇಂದ್ರ ಸರಕಾರದಿಂದಲೂ ಪರಿಹಾರ ಧನವನ್ನು ನೀಡಲಾಗುತ್ತದೆಂದು ಸ್ಪಷ್ಟಪಡಿಸಿದರು.

ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಸರಕಾರಿ ಜಮೀನು ಅಥವ ಖಾಸಗಿ ಜಮೀನನ್ನು ಸರಕಾರದ ಮೂಲಕ ಖರೀದಿಸಿ ಸೂರು ಒದಗಿಸುವ ಭರವಸೆಯನ್ನು ನೀಡಿ, ಪ್ರಾಕೃತಿಕ ವಿಕೋಪದಲ್ಲಿ ಕೃಷಿ ಫಸಲು ಹೊಂದಿದ ಭೂಮಿಯನ್ನು ಹಲವರು ಕಳೆದುಕೊಂಡಿದ್ದಾರೆ. ಇಂತಹವರಿಗೆ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭ ತಾಲ್ಲೂಕು ತಹಶೀಲ್ದಾರ್ ಪುರಂದರ ಅವರಿಂದ ಪರಿಹಾರ ಕಾರ್ಯಗಳ ಬಗ್ಗೆ ಸಂಸದರು ಮಾಹಿತಿ ಪಡೆದುಕೊಂಡರು.
ಸಂಸದರ ತೋರ ಭೇಟಿ ಸಂದರ್ಭ ಕಂದಾಯ ಅಧಿಕಾರಿ ಪಳಂಗಪ್ಪ, ತಾಲೂಕು ಬಿಜೆಪಿ ಅಧ್ಯಕ್ಷ ಅರುಣ್ ಭೀಮಯ್ಯ, ಜಿಪಂ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ತಾಪಂ ಸದಸ್ಯರಾದ ಬಿ.ಎಂ. ಗಣೇಶ್, ಪಿಡಿಒ ಪ್ರಮೋದ್ ಕುಮಾರ್ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror