ಮಡಿಕೇರಿ :ಮಹಾಮಳೆಯ ಗುಡ್ಡ ಕುಸಿತದಿಂದ ಜೀವಹಾನಿಯಾದ ತೋರ ಗ್ರಾಮದ ಘಟನಾ ಸ್ಥಳಕ್ಕೆ ಸಂಸದ ಪ್ರತಾಪ ಸಿಂಹ ಅವರು ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ಭೂ ಕುಸಿತದಿಂದ ಕುಟುಂಬದ ಸದಸ್ಯರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ ಪ್ರಭು ಕುಮಾರ್ ಭಟ್ ಮತ್ತು ಹರೀಶ್ ಅವರನ್ನು ಭೇಟಿಯಾಗಿ, ಸಾಂತ್ವನ ನುಡಿದ ಸಂಸದರು, ಇದೇ ಸಂದರ್ಭ ನಾಪತ್ತೆಯಾದವರ ಶೋಧ ಕಾರ್ಯಾಚರಣೆಯನ್ನು ವೀಕ್ಷಿಸಿ, ತಂಡದ ಮುಖ್ಯಸ್ಥರೊಂದಿಗೆ ಕಾರ್ಯಾಚರಣೆಯ ಮಾಹಿತಿ ಪಡೆದರು.
ಸೂರು ಒದಗಿಸುವ ಭರವಸೆ- ಪ್ರಾಕೃತಿಕ ವಿಕೋಪದಿಂದ ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಕೇಂದ್ರ ಸರಕಾರವು ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದ ಸಂಸದರು, ರಾಜ್ಯ ಸರಕಾರ ಸಂತ್ರಸ್ತರಿಗೆ ನೀಡಿದ ಪರಿಹಾರದೊಂದಿಗೆ ಕೇಂದ್ರ ಸರಕಾರದಿಂದಲೂ ಪರಿಹಾರ ಧನವನ್ನು ನೀಡಲಾಗುತ್ತದೆಂದು ಸ್ಪಷ್ಟಪಡಿಸಿದರು.
ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಸರಕಾರಿ ಜಮೀನು ಅಥವ ಖಾಸಗಿ ಜಮೀನನ್ನು ಸರಕಾರದ ಮೂಲಕ ಖರೀದಿಸಿ ಸೂರು ಒದಗಿಸುವ ಭರವಸೆಯನ್ನು ನೀಡಿ, ಪ್ರಾಕೃತಿಕ ವಿಕೋಪದಲ್ಲಿ ಕೃಷಿ ಫಸಲು ಹೊಂದಿದ ಭೂಮಿಯನ್ನು ಹಲವರು ಕಳೆದುಕೊಂಡಿದ್ದಾರೆ. ಇಂತಹವರಿಗೆ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭ ತಾಲ್ಲೂಕು ತಹಶೀಲ್ದಾರ್ ಪುರಂದರ ಅವರಿಂದ ಪರಿಹಾರ ಕಾರ್ಯಗಳ ಬಗ್ಗೆ ಸಂಸದರು ಮಾಹಿತಿ ಪಡೆದುಕೊಂಡರು.
ಸಂಸದರ ತೋರ ಭೇಟಿ ಸಂದರ್ಭ ಕಂದಾಯ ಅಧಿಕಾರಿ ಪಳಂಗಪ್ಪ, ತಾಲೂಕು ಬಿಜೆಪಿ ಅಧ್ಯಕ್ಷ ಅರುಣ್ ಭೀಮಯ್ಯ, ಜಿಪಂ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ತಾಪಂ ಸದಸ್ಯರಾದ ಬಿ.ಎಂ. ಗಣೇಶ್, ಪಿಡಿಒ ಪ್ರಮೋದ್ ಕುಮಾರ್ ಮೊದಲಾದವರಿದ್ದರು.
ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…