ಮಡಿಕೇರಿ :ಮಹಾಮಳೆಯ ಗುಡ್ಡ ಕುಸಿತದಿಂದ ಜೀವಹಾನಿಯಾದ ತೋರ ಗ್ರಾಮದ ಘಟನಾ ಸ್ಥಳಕ್ಕೆ ಸಂಸದ ಪ್ರತಾಪ ಸಿಂಹ ಅವರು ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ಭೂ ಕುಸಿತದಿಂದ ಕುಟುಂಬದ ಸದಸ್ಯರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ ಪ್ರಭು ಕುಮಾರ್ ಭಟ್ ಮತ್ತು ಹರೀಶ್ ಅವರನ್ನು ಭೇಟಿಯಾಗಿ, ಸಾಂತ್ವನ ನುಡಿದ ಸಂಸದರು, ಇದೇ ಸಂದರ್ಭ ನಾಪತ್ತೆಯಾದವರ ಶೋಧ ಕಾರ್ಯಾಚರಣೆಯನ್ನು ವೀಕ್ಷಿಸಿ, ತಂಡದ ಮುಖ್ಯಸ್ಥರೊಂದಿಗೆ ಕಾರ್ಯಾಚರಣೆಯ ಮಾಹಿತಿ ಪಡೆದರು.
ಸೂರು ಒದಗಿಸುವ ಭರವಸೆ- ಪ್ರಾಕೃತಿಕ ವಿಕೋಪದಿಂದ ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಕೇಂದ್ರ ಸರಕಾರವು ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದ ಸಂಸದರು, ರಾಜ್ಯ ಸರಕಾರ ಸಂತ್ರಸ್ತರಿಗೆ ನೀಡಿದ ಪರಿಹಾರದೊಂದಿಗೆ ಕೇಂದ್ರ ಸರಕಾರದಿಂದಲೂ ಪರಿಹಾರ ಧನವನ್ನು ನೀಡಲಾಗುತ್ತದೆಂದು ಸ್ಪಷ್ಟಪಡಿಸಿದರು.
ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಸರಕಾರಿ ಜಮೀನು ಅಥವ ಖಾಸಗಿ ಜಮೀನನ್ನು ಸರಕಾರದ ಮೂಲಕ ಖರೀದಿಸಿ ಸೂರು ಒದಗಿಸುವ ಭರವಸೆಯನ್ನು ನೀಡಿ, ಪ್ರಾಕೃತಿಕ ವಿಕೋಪದಲ್ಲಿ ಕೃಷಿ ಫಸಲು ಹೊಂದಿದ ಭೂಮಿಯನ್ನು ಹಲವರು ಕಳೆದುಕೊಂಡಿದ್ದಾರೆ. ಇಂತಹವರಿಗೆ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭ ತಾಲ್ಲೂಕು ತಹಶೀಲ್ದಾರ್ ಪುರಂದರ ಅವರಿಂದ ಪರಿಹಾರ ಕಾರ್ಯಗಳ ಬಗ್ಗೆ ಸಂಸದರು ಮಾಹಿತಿ ಪಡೆದುಕೊಂಡರು.
ಸಂಸದರ ತೋರ ಭೇಟಿ ಸಂದರ್ಭ ಕಂದಾಯ ಅಧಿಕಾರಿ ಪಳಂಗಪ್ಪ, ತಾಲೂಕು ಬಿಜೆಪಿ ಅಧ್ಯಕ್ಷ ಅರುಣ್ ಭೀಮಯ್ಯ, ಜಿಪಂ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ತಾಪಂ ಸದಸ್ಯರಾದ ಬಿ.ಎಂ. ಗಣೇಶ್, ಪಿಡಿಒ ಪ್ರಮೋದ್ ಕುಮಾರ್ ಮೊದಲಾದವರಿದ್ದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…