Advertisement
ಸುದ್ದಿಗಳು

ಗುಡ್ಡ ಕುಸಿದ ತೋರ ಗ್ರಾಮಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ : ಕೇಂದ್ರ ಸರಕಾರದಿಂದ ಅಗತ್ಯ ನೆರವು ನೀಡುವ ಭರವಸೆ

Share

ಮಡಿಕೇರಿ  :ಮಹಾಮಳೆಯ ಗುಡ್ಡ ಕುಸಿತದಿಂದ ಜೀವಹಾನಿಯಾದ ತೋರ ಗ್ರಾಮದ ಘಟನಾ ಸ್ಥಳಕ್ಕೆ ಸಂಸದ ಪ್ರತಾಪ ಸಿಂಹ ಅವರು ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು.

ಭೂ ಕುಸಿತದಿಂದ ಕುಟುಂಬದ ಸದಸ್ಯರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ ಪ್ರಭು ಕುಮಾರ್ ಭಟ್ ಮತ್ತು ಹರೀಶ್ ಅವರನ್ನು ಭೇಟಿಯಾಗಿ, ಸಾಂತ್ವನ ನುಡಿದ ಸಂಸದರು, ಇದೇ ಸಂದರ್ಭ ನಾಪತ್ತೆಯಾದವರ ಶೋಧ ಕಾರ್ಯಾಚರಣೆಯನ್ನು ವೀಕ್ಷಿಸಿ, ತಂಡದ ಮುಖ್ಯಸ್ಥರೊಂದಿಗೆ ಕಾರ್ಯಾಚರಣೆಯ ಮಾಹಿತಿ ಪಡೆದರು.

ಸೂರು ಒದಗಿಸುವ ಭರವಸೆ- ಪ್ರಾಕೃತಿಕ ವಿಕೋಪದಿಂದ ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಕೇಂದ್ರ ಸರಕಾರವು ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದ ಸಂಸದರು, ರಾಜ್ಯ ಸರಕಾರ ಸಂತ್ರಸ್ತರಿಗೆ ನೀಡಿದ ಪರಿಹಾರದೊಂದಿಗೆ ಕೇಂದ್ರ ಸರಕಾರದಿಂದಲೂ ಪರಿಹಾರ ಧನವನ್ನು ನೀಡಲಾಗುತ್ತದೆಂದು ಸ್ಪಷ್ಟಪಡಿಸಿದರು.

ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಸರಕಾರಿ ಜಮೀನು ಅಥವ ಖಾಸಗಿ ಜಮೀನನ್ನು ಸರಕಾರದ ಮೂಲಕ ಖರೀದಿಸಿ ಸೂರು ಒದಗಿಸುವ ಭರವಸೆಯನ್ನು ನೀಡಿ, ಪ್ರಾಕೃತಿಕ ವಿಕೋಪದಲ್ಲಿ ಕೃಷಿ ಫಸಲು ಹೊಂದಿದ ಭೂಮಿಯನ್ನು ಹಲವರು ಕಳೆದುಕೊಂಡಿದ್ದಾರೆ. ಇಂತಹವರಿಗೆ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭ ತಾಲ್ಲೂಕು ತಹಶೀಲ್ದಾರ್ ಪುರಂದರ ಅವರಿಂದ ಪರಿಹಾರ ಕಾರ್ಯಗಳ ಬಗ್ಗೆ ಸಂಸದರು ಮಾಹಿತಿ ಪಡೆದುಕೊಂಡರು.
ಸಂಸದರ ತೋರ ಭೇಟಿ ಸಂದರ್ಭ ಕಂದಾಯ ಅಧಿಕಾರಿ ಪಳಂಗಪ್ಪ, ತಾಲೂಕು ಬಿಜೆಪಿ ಅಧ್ಯಕ್ಷ ಅರುಣ್ ಭೀಮಯ್ಯ, ಜಿಪಂ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ತಾಪಂ ಸದಸ್ಯರಾದ ಬಿ.ಎಂ. ಗಣೇಶ್, ಪಿಡಿಒ ಪ್ರಮೋದ್ ಕುಮಾರ್ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

12 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

12 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

13 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

21 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

21 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

2 days ago