ಪಂಜ: ಸಮಾಜಕ್ಕೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಶಿಕ್ಷಣ ಸಂಸ್ಥೆಗಳು ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಸಂಘಸಂಸ್ಥೆಗಳು ಸರಕಾರದ ಜೊತೆಯಲ್ಲಿ ಕೈ ಜೋಡಿಸಬೇಕು. ಆದ್ದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತು ಸಮಾಜದಲ್ಲಿ ಮುಂದುವರಿಯಬಹುದು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು.
ಅವರು ಗಾಂಧೀಜಯಂತಿಯಂದು ಸರಕಾರಿ ಪದವಿಪೂರ್ವ ಕಾಲೇಜು ಪಂಜ ಇಲ್ಲಿಗೆ ಎಂ.ಆರ್.ಪಿ.ಎಲ್. ಮಂಗಳೂರು 11.46 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿಕೊಟ್ಟ ಶೌಚಾಲಯ ಕಟ್ಟಡವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಗಾಂಧೀಜಯಂತಿಯ ದಿನಾಚರಣೆಯಂದು ಪ್ರತಿಯೊಬ್ಬರೂ ವ್ಯಸನಮುಕ್ತ, ಸ್ವಚ್ಛಭಾರತದ ಕಡೆಗೂ ಗಮನಹರಿಸಬೇಕಾದ ಅಗತ್ಯವಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಕಾರ್ಯಪ್ಪ ಚಿದ್ಗಲ್ ವಹಿಸಿ ಪ್ಲಾಸ್ಲಿಕ್ ಮುಕ್ತ ಸಮಾಜ ನಿರ್ಮಾಣವಾಗಬೇಕು ಜೊತೆಯಲ್ಲಿ ಗಾಂಧೀಜಿಯ ಸ್ವಚ್ಛಭಾರತದ ಕನಸು ನನಸುಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಹಿರಿದು ಎಂಬ ಸಂದೇಶವನ್ನು ನೀಡಿದರು.
ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚೀನಪ್ಪ ಕಾಣಿಕೆ, ಮೇಲುಸ್ತುವಾರಿ ಸಮಿತಿಯ ಕಾರ್ಯಧ್ಯಕ್ಷ ಸೋಮಶೇಖರ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಶಶಿಧರ ಪರಮಲೆ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಗಾಯತ್ರಿ ಬಿ.ಎಸ್. ಪ್ರಾರ್ಥಿಸಿದರು. ಪ್ರಾಂಶುಪಾಲ ಪ್ರಭಾಕರ ಕಿರಿಭಾಗ ಸ್ವಾಗತಿಸಿದರು. ಶಶಿಧರ ಪಿ. ವಂದಿಸಿದರು. ಕನ್ನಡ ಉಪನ್ಯಾಸಕ ವೆಂಕಪ್ಪ ಗೌಡ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…
ಈಗಿನ ಹೆತ್ತವರ ಮಾತೇ ಹಾಗೆ. ನಾವು ಕಷ್ಟಪಟ್ಟಿದ್ದೇವೆ. ನಮ್ಮ ಮಕ್ಕಳು ಕಷ್ಟಪಡುವುದು ಬೇಡ.…