ಪಂಜ: ಸಮಾಜಕ್ಕೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಶಿಕ್ಷಣ ಸಂಸ್ಥೆಗಳು ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಸಂಘಸಂಸ್ಥೆಗಳು ಸರಕಾರದ ಜೊತೆಯಲ್ಲಿ ಕೈ ಜೋಡಿಸಬೇಕು. ಆದ್ದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತು ಸಮಾಜದಲ್ಲಿ ಮುಂದುವರಿಯಬಹುದು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು.
ಅವರು ಗಾಂಧೀಜಯಂತಿಯಂದು ಸರಕಾರಿ ಪದವಿಪೂರ್ವ ಕಾಲೇಜು ಪಂಜ ಇಲ್ಲಿಗೆ ಎಂ.ಆರ್.ಪಿ.ಎಲ್. ಮಂಗಳೂರು 11.46 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿಕೊಟ್ಟ ಶೌಚಾಲಯ ಕಟ್ಟಡವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಗಾಂಧೀಜಯಂತಿಯ ದಿನಾಚರಣೆಯಂದು ಪ್ರತಿಯೊಬ್ಬರೂ ವ್ಯಸನಮುಕ್ತ, ಸ್ವಚ್ಛಭಾರತದ ಕಡೆಗೂ ಗಮನಹರಿಸಬೇಕಾದ ಅಗತ್ಯವಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಕಾರ್ಯಪ್ಪ ಚಿದ್ಗಲ್ ವಹಿಸಿ ಪ್ಲಾಸ್ಲಿಕ್ ಮುಕ್ತ ಸಮಾಜ ನಿರ್ಮಾಣವಾಗಬೇಕು ಜೊತೆಯಲ್ಲಿ ಗಾಂಧೀಜಿಯ ಸ್ವಚ್ಛಭಾರತದ ಕನಸು ನನಸುಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಹಿರಿದು ಎಂಬ ಸಂದೇಶವನ್ನು ನೀಡಿದರು.
ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚೀನಪ್ಪ ಕಾಣಿಕೆ, ಮೇಲುಸ್ತುವಾರಿ ಸಮಿತಿಯ ಕಾರ್ಯಧ್ಯಕ್ಷ ಸೋಮಶೇಖರ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಶಶಿಧರ ಪರಮಲೆ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಗಾಯತ್ರಿ ಬಿ.ಎಸ್. ಪ್ರಾರ್ಥಿಸಿದರು. ಪ್ರಾಂಶುಪಾಲ ಪ್ರಭಾಕರ ಕಿರಿಭಾಗ ಸ್ವಾಗತಿಸಿದರು. ಶಶಿಧರ ಪಿ. ವಂದಿಸಿದರು. ಕನ್ನಡ ಉಪನ್ಯಾಸಕ ವೆಂಕಪ್ಪ ಗೌಡ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…