Advertisement

ಗುತ್ತಿಗಾರಿನಲ್ಲಿ ಡೆಂಘೆ ಜ್ವರ ಹೆಚ್ಚಾಗಿತ್ತಂತೆ..! ಸ್ವಚ್ಛತೆಯ ಕೊರತೆಯೂ ಇದಕ್ಕೆ ಕಾರಣವೇ ?

Share

ಗುತ್ತಿಗಾರು: ಗುತ್ತಿಗಾರು ಪ್ರದೇಶದಲ್ಲಿ ಡೆಂಘೆ ವಿಪರೀತವಾಗಿ ಕಂಡುಬಂದಿತ್ತು. ಈಗಲೂ ಹಲವು ಕಡೆ ಡೆಂಘೆ ಪ್ರಕರಣಗಳು ಇವೆ. ಈ ಹಿಂದೆಯೂ ಡೆಂಘೆ, ಮಲೇರಿಯಾ ಇಲ್ಲಿ ಕಂಡುಬಂದಿತ್ತು. ಈ ಹಿಂದೆ ಆರೋಗ್ಯ ಸಚಿವರೇ ಗುತ್ತಿಗಾರಿಗೆ ಭೇಟಿ ನೀಡಿದ್ದರು. ಇದೀಗ ಆರೋಗ್ಯ ಸಮಸ್ಯೆಗೆ ಸ್ವಚ್ಛತೆಯ ಕೊರತೆಯೂ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

Advertisement
Advertisement
Advertisement
Advertisement

ಇದಕ್ಕೆ ಇನ್ನೊಂದು ಪ್ರಮುಖ ಕಾರಣ, ಸ್ವಚ್ಛತೆಯ ಕೊರತೆ. ಗುತ್ತಿಗಾರಿನ ವಿವಿದೆಡೆ ಸ್ವಚ್ಛತೆಯ ಕೊರತೆ ಕಾಣುತ್ತದೆ. ಸ್ವಚ್ಛತಾ ಆಂದೋಲನ ನಡೆದರೆ ನಂತರ ಮತ್ತೆ ಅಷ್ಟೇ ಪ್ರಮಾಣದ ಕಸ, ತ್ಯಾಜ್ಯ ಕಾಣುತ್ತದೆ. ಇನ್ನು ಚರಂಡಿಗಳು ವ್ಯವಸ್ಥಿತ ರೀತಿಯಲ್ಲಿ ಇಲ್ಲ. ಈಗ ಮಳೆ ಶುರುವಾಗುತ್ತಿದ್ದಂತೆಯೇ ಗುತ್ತಿಗಾರು ಪೇಟೆಯ ನೀರು ಚರಂಡಿ ಮೂಲಕ ಹರಿದು ಬಳ್ಳಕ್ಕ ಕಡೆಗೆ ತಿರುವ ಪ್ರದೇಶದ ಮೋರಿಯಲ್ಲಿ ಇಡೀ ತ್ಯಾಜ್ಯ ಸಿಲುಕಿಕೊಂಡು ನೀರು ಬ್ಲಾಕ್ ಆಗಿ ತ್ಯಾಜ್ಯಗಳೆಲ್ಲಾ ಅಲ್ಲಲ್ಲೇ ನಿಂತು ಸೊಳ್ಳೆ ಉತ್ಪಾದನಾ ತಾಣವಾಗುತ್ತಿದೆ. ಹೀಗಾಗಿ ಡೆಂಘೆ ಹರಡುವುದಕ್ಕೆ ಇದೂ ಕಾರಣವಾಗುತ್ತದೆ. ಈ ಬಗ್ಗೆ ಹಲವು ಬಾರಿ ಪಂಚಾಯತ್ ಗೆ , ಆರೋಗ್ಯ ಇಲಾಖೆಗೆ ಸಾರ್ವಜನಿಕರು ಮೌಖಿಕವಗಿ ತಿಳಿಸಿದ್ದಾರೆ. ಹೀಗಾದರೂ ಸ್ವಚ್ಛತೆಗೆ, ಮುಂಜಾಗ್ರತೆಗೆ ಕ್ರಮವಾಗಿಲ್ಲ ಎಂದು ದೂರಿದ್ದಾರೆ.  ತಕ್ಷಣವೇ ಇಲ್ಲಿ ಕ್ರಮ ಆಗದೇ ಇದ್ದರೆ ತ್ಯಾಜ್ಯ ಸಹಿತ ಕೊಳಚೆ ನೀರು ಅಲ್ಲಲ್ಲಿ ಶೇಖರಣೆಯಾಗಿ ರೋಗ ಹೆಚ್ಚಾಗುವ ಭೀತಿ ಇದೆ. ಈ ಬಗ್ಗೆ ಸಂಬಂಧಿತರು ಗಮನಹರಿಸಬೇಕಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕಿದೆ.

Advertisement

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

3 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

3 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

11 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

14 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

1 day ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

1 day ago