ಗುತ್ತಿಗಾರು: ಗುತ್ತಿಗಾರು ಪ್ರದೇಶದಲ್ಲಿ ಡೆಂಘೆ ವಿಪರೀತವಾಗಿ ಕಂಡುಬಂದಿತ್ತು. ಈಗಲೂ ಹಲವು ಕಡೆ ಡೆಂಘೆ ಪ್ರಕರಣಗಳು ಇವೆ. ಈ ಹಿಂದೆಯೂ ಡೆಂಘೆ, ಮಲೇರಿಯಾ ಇಲ್ಲಿ ಕಂಡುಬಂದಿತ್ತು. ಈ ಹಿಂದೆ ಆರೋಗ್ಯ ಸಚಿವರೇ ಗುತ್ತಿಗಾರಿಗೆ ಭೇಟಿ ನೀಡಿದ್ದರು. ಇದೀಗ ಆರೋಗ್ಯ ಸಮಸ್ಯೆಗೆ ಸ್ವಚ್ಛತೆಯ ಕೊರತೆಯೂ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.
ಇದಕ್ಕೆ ಇನ್ನೊಂದು ಪ್ರಮುಖ ಕಾರಣ, ಸ್ವಚ್ಛತೆಯ ಕೊರತೆ. ಗುತ್ತಿಗಾರಿನ ವಿವಿದೆಡೆ ಸ್ವಚ್ಛತೆಯ ಕೊರತೆ ಕಾಣುತ್ತದೆ. ಸ್ವಚ್ಛತಾ ಆಂದೋಲನ ನಡೆದರೆ ನಂತರ ಮತ್ತೆ ಅಷ್ಟೇ ಪ್ರಮಾಣದ ಕಸ, ತ್ಯಾಜ್ಯ ಕಾಣುತ್ತದೆ. ಇನ್ನು ಚರಂಡಿಗಳು ವ್ಯವಸ್ಥಿತ ರೀತಿಯಲ್ಲಿ ಇಲ್ಲ. ಈಗ ಮಳೆ ಶುರುವಾಗುತ್ತಿದ್ದಂತೆಯೇ ಗುತ್ತಿಗಾರು ಪೇಟೆಯ ನೀರು ಚರಂಡಿ ಮೂಲಕ ಹರಿದು ಬಳ್ಳಕ್ಕ ಕಡೆಗೆ ತಿರುವ ಪ್ರದೇಶದ ಮೋರಿಯಲ್ಲಿ ಇಡೀ ತ್ಯಾಜ್ಯ ಸಿಲುಕಿಕೊಂಡು ನೀರು ಬ್ಲಾಕ್ ಆಗಿ ತ್ಯಾಜ್ಯಗಳೆಲ್ಲಾ ಅಲ್ಲಲ್ಲೇ ನಿಂತು ಸೊಳ್ಳೆ ಉತ್ಪಾದನಾ ತಾಣವಾಗುತ್ತಿದೆ. ಹೀಗಾಗಿ ಡೆಂಘೆ ಹರಡುವುದಕ್ಕೆ ಇದೂ ಕಾರಣವಾಗುತ್ತದೆ. ಈ ಬಗ್ಗೆ ಹಲವು ಬಾರಿ ಪಂಚಾಯತ್ ಗೆ , ಆರೋಗ್ಯ ಇಲಾಖೆಗೆ ಸಾರ್ವಜನಿಕರು ಮೌಖಿಕವಗಿ ತಿಳಿಸಿದ್ದಾರೆ. ಹೀಗಾದರೂ ಸ್ವಚ್ಛತೆಗೆ, ಮುಂಜಾಗ್ರತೆಗೆ ಕ್ರಮವಾಗಿಲ್ಲ ಎಂದು ದೂರಿದ್ದಾರೆ. ತಕ್ಷಣವೇ ಇಲ್ಲಿ ಕ್ರಮ ಆಗದೇ ಇದ್ದರೆ ತ್ಯಾಜ್ಯ ಸಹಿತ ಕೊಳಚೆ ನೀರು ಅಲ್ಲಲ್ಲಿ ಶೇಖರಣೆಯಾಗಿ ರೋಗ ಹೆಚ್ಚಾಗುವ ಭೀತಿ ಇದೆ. ಈ ಬಗ್ಗೆ ಸಂಬಂಧಿತರು ಗಮನಹರಿಸಬೇಕಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…