ಗುತ್ತಿಗಾರಿನಲ್ಲಿ ಡೆಂಘೆ ಜ್ವರ ಹೆಚ್ಚಾಗಿತ್ತಂತೆ..! ಸ್ವಚ್ಛತೆಯ ಕೊರತೆಯೂ ಇದಕ್ಕೆ ಕಾರಣವೇ ?

Share

ಗುತ್ತಿಗಾರು: ಗುತ್ತಿಗಾರು ಪ್ರದೇಶದಲ್ಲಿ ಡೆಂಘೆ ವಿಪರೀತವಾಗಿ ಕಂಡುಬಂದಿತ್ತು. ಈಗಲೂ ಹಲವು ಕಡೆ ಡೆಂಘೆ ಪ್ರಕರಣಗಳು ಇವೆ. ಈ ಹಿಂದೆಯೂ ಡೆಂಘೆ, ಮಲೇರಿಯಾ ಇಲ್ಲಿ ಕಂಡುಬಂದಿತ್ತು. ಈ ಹಿಂದೆ ಆರೋಗ್ಯ ಸಚಿವರೇ ಗುತ್ತಿಗಾರಿಗೆ ಭೇಟಿ ನೀಡಿದ್ದರು. ಇದೀಗ ಆರೋಗ್ಯ ಸಮಸ್ಯೆಗೆ ಸ್ವಚ್ಛತೆಯ ಕೊರತೆಯೂ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

Advertisement
Advertisement

ಇದಕ್ಕೆ ಇನ್ನೊಂದು ಪ್ರಮುಖ ಕಾರಣ, ಸ್ವಚ್ಛತೆಯ ಕೊರತೆ. ಗುತ್ತಿಗಾರಿನ ವಿವಿದೆಡೆ ಸ್ವಚ್ಛತೆಯ ಕೊರತೆ ಕಾಣುತ್ತದೆ. ಸ್ವಚ್ಛತಾ ಆಂದೋಲನ ನಡೆದರೆ ನಂತರ ಮತ್ತೆ ಅಷ್ಟೇ ಪ್ರಮಾಣದ ಕಸ, ತ್ಯಾಜ್ಯ ಕಾಣುತ್ತದೆ. ಇನ್ನು ಚರಂಡಿಗಳು ವ್ಯವಸ್ಥಿತ ರೀತಿಯಲ್ಲಿ ಇಲ್ಲ. ಈಗ ಮಳೆ ಶುರುವಾಗುತ್ತಿದ್ದಂತೆಯೇ ಗುತ್ತಿಗಾರು ಪೇಟೆಯ ನೀರು ಚರಂಡಿ ಮೂಲಕ ಹರಿದು ಬಳ್ಳಕ್ಕ ಕಡೆಗೆ ತಿರುವ ಪ್ರದೇಶದ ಮೋರಿಯಲ್ಲಿ ಇಡೀ ತ್ಯಾಜ್ಯ ಸಿಲುಕಿಕೊಂಡು ನೀರು ಬ್ಲಾಕ್ ಆಗಿ ತ್ಯಾಜ್ಯಗಳೆಲ್ಲಾ ಅಲ್ಲಲ್ಲೇ ನಿಂತು ಸೊಳ್ಳೆ ಉತ್ಪಾದನಾ ತಾಣವಾಗುತ್ತಿದೆ. ಹೀಗಾಗಿ ಡೆಂಘೆ ಹರಡುವುದಕ್ಕೆ ಇದೂ ಕಾರಣವಾಗುತ್ತದೆ. ಈ ಬಗ್ಗೆ ಹಲವು ಬಾರಿ ಪಂಚಾಯತ್ ಗೆ , ಆರೋಗ್ಯ ಇಲಾಖೆಗೆ ಸಾರ್ವಜನಿಕರು ಮೌಖಿಕವಗಿ ತಿಳಿಸಿದ್ದಾರೆ. ಹೀಗಾದರೂ ಸ್ವಚ್ಛತೆಗೆ, ಮುಂಜಾಗ್ರತೆಗೆ ಕ್ರಮವಾಗಿಲ್ಲ ಎಂದು ದೂರಿದ್ದಾರೆ.  ತಕ್ಷಣವೇ ಇಲ್ಲಿ ಕ್ರಮ ಆಗದೇ ಇದ್ದರೆ ತ್ಯಾಜ್ಯ ಸಹಿತ ಕೊಳಚೆ ನೀರು ಅಲ್ಲಲ್ಲಿ ಶೇಖರಣೆಯಾಗಿ ರೋಗ ಹೆಚ್ಚಾಗುವ ಭೀತಿ ಇದೆ. ಈ ಬಗ್ಗೆ ಸಂಬಂಧಿತರು ಗಮನಹರಿಸಬೇಕಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

4 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

8 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

20 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago