Advertisement

ಗುತ್ತಿಗಾರಿನಲ್ಲಿ ಡೆಂಘೆ ಜ್ವರ ಹೆಚ್ಚಾಗಿತ್ತಂತೆ..! ಸ್ವಚ್ಛತೆಯ ಕೊರತೆಯೂ ಇದಕ್ಕೆ ಕಾರಣವೇ ?

Share

ಗುತ್ತಿಗಾರು: ಗುತ್ತಿಗಾರು ಪ್ರದೇಶದಲ್ಲಿ ಡೆಂಘೆ ವಿಪರೀತವಾಗಿ ಕಂಡುಬಂದಿತ್ತು. ಈಗಲೂ ಹಲವು ಕಡೆ ಡೆಂಘೆ ಪ್ರಕರಣಗಳು ಇವೆ. ಈ ಹಿಂದೆಯೂ ಡೆಂಘೆ, ಮಲೇರಿಯಾ ಇಲ್ಲಿ ಕಂಡುಬಂದಿತ್ತು. ಈ ಹಿಂದೆ ಆರೋಗ್ಯ ಸಚಿವರೇ ಗುತ್ತಿಗಾರಿಗೆ ಭೇಟಿ ನೀಡಿದ್ದರು. ಇದೀಗ ಆರೋಗ್ಯ ಸಮಸ್ಯೆಗೆ ಸ್ವಚ್ಛತೆಯ ಕೊರತೆಯೂ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಇದಕ್ಕೆ ಇನ್ನೊಂದು ಪ್ರಮುಖ ಕಾರಣ, ಸ್ವಚ್ಛತೆಯ ಕೊರತೆ. ಗುತ್ತಿಗಾರಿನ ವಿವಿದೆಡೆ ಸ್ವಚ್ಛತೆಯ ಕೊರತೆ ಕಾಣುತ್ತದೆ. ಸ್ವಚ್ಛತಾ ಆಂದೋಲನ ನಡೆದರೆ ನಂತರ ಮತ್ತೆ ಅಷ್ಟೇ ಪ್ರಮಾಣದ ಕಸ, ತ್ಯಾಜ್ಯ ಕಾಣುತ್ತದೆ. ಇನ್ನು ಚರಂಡಿಗಳು ವ್ಯವಸ್ಥಿತ ರೀತಿಯಲ್ಲಿ ಇಲ್ಲ. ಈಗ ಮಳೆ ಶುರುವಾಗುತ್ತಿದ್ದಂತೆಯೇ ಗುತ್ತಿಗಾರು ಪೇಟೆಯ ನೀರು ಚರಂಡಿ ಮೂಲಕ ಹರಿದು ಬಳ್ಳಕ್ಕ ಕಡೆಗೆ ತಿರುವ ಪ್ರದೇಶದ ಮೋರಿಯಲ್ಲಿ ಇಡೀ ತ್ಯಾಜ್ಯ ಸಿಲುಕಿಕೊಂಡು ನೀರು ಬ್ಲಾಕ್ ಆಗಿ ತ್ಯಾಜ್ಯಗಳೆಲ್ಲಾ ಅಲ್ಲಲ್ಲೇ ನಿಂತು ಸೊಳ್ಳೆ ಉತ್ಪಾದನಾ ತಾಣವಾಗುತ್ತಿದೆ. ಹೀಗಾಗಿ ಡೆಂಘೆ ಹರಡುವುದಕ್ಕೆ ಇದೂ ಕಾರಣವಾಗುತ್ತದೆ. ಈ ಬಗ್ಗೆ ಹಲವು ಬಾರಿ ಪಂಚಾಯತ್ ಗೆ , ಆರೋಗ್ಯ ಇಲಾಖೆಗೆ ಸಾರ್ವಜನಿಕರು ಮೌಖಿಕವಗಿ ತಿಳಿಸಿದ್ದಾರೆ. ಹೀಗಾದರೂ ಸ್ವಚ್ಛತೆಗೆ, ಮುಂಜಾಗ್ರತೆಗೆ ಕ್ರಮವಾಗಿಲ್ಲ ಎಂದು ದೂರಿದ್ದಾರೆ.  ತಕ್ಷಣವೇ ಇಲ್ಲಿ ಕ್ರಮ ಆಗದೇ ಇದ್ದರೆ ತ್ಯಾಜ್ಯ ಸಹಿತ ಕೊಳಚೆ ನೀರು ಅಲ್ಲಲ್ಲಿ ಶೇಖರಣೆಯಾಗಿ ರೋಗ ಹೆಚ್ಚಾಗುವ ಭೀತಿ ಇದೆ. ಈ ಬಗ್ಗೆ ಸಂಬಂಧಿತರು ಗಮನಹರಿಸಬೇಕಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

2 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

16 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

16 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

23 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago