ಗುತ್ತಿಗಾರಿನಲ್ಲಿ ಹೆಚ್ಚಾಗುತ್ತಿದೆ ಡೆಂಘೆ ಪ್ರಕರಣ

July 1, 2019
3:10 PM

ಸುಳ್ಯ: ತಾಲೂಕಿನ ವಿವಿಧ ಗ್ರಾಮಗಳಲ್ಲಿ  ಡೆಂಘೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದೆ. ಇದರಲ್ಲಿ   ಗುತ್ತಿಗಾರು , ಬಳ್ಪ ಪ್ರದೇಶದಲ್ಲಿ  ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿದೆ. ಗುತ್ತಿಗಾರು ಸರಕಾರಿ ಆಸ್ಪತ್ರೆಗೆ ಗ್ರಾಮೀಣ ಭಾಗದಿಂದ ಜ್ವರದ ಲಕ್ಷಣಗಳಿಂದ ಬರುತ್ತಿದ್ದು ದಿನೇ ದಿನೇ ಜ್ವರ ಬಾಧಿತರ ಸಂಖ್ಯೆ ಹೆಚ್ಚಾಗುತ್ತಿದೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Advertisement
Advertisement

ಇಲಾಖೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದರೂ ಮಳೆ ಹಾಗೂ ಬಿಸಿಲಿನ ಕಾರಣದಿಂದ ಸೊಳ್ಳೆಗಳ ಉತ್ಪಾದನೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಹೇಳುತ್ತಾರೆ. ಈಗಾಗಲೇ ಗುತ್ತಿಗಾರಿನಲ್ಲಿ 2 ಜನರಿಗೆ ಡೆಂಘೆ ದೃಢಪಟ್ಟರೆ 10 ಕ್ಕೂ ಅಧಿಕ ಮಂದಿಯ ರಕ್ತದ ಸ್ಯಾಂಪಲ್ ಖಾಸಗಿಯಾಗಿ ಕಳುಹಿಸಲಾಗಿದೆ. ಖಾಸಗಿ ವೈದ್ಯರು ನಿನ್ನೆ ಹಾಗೂ ಇಂದು ಸೇರಿ ಒಟ್ಟು 4 ಮಂದಿಯನ್ನು  ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯ ಹಾಗೂ ಪುತ್ತೂರಿಗೆ ಹೆಚ್ಚಿನ ಚಿಕಿತ್ಸೆಗೆ  ಕಳುಹಿಸಿದ್ದಾರೆ.

ಈಗ ಸಾರ್ವಜನಿಕರೇ ಎಚ್ಚರ ವಹಿಸಬೇಕಾಗಿದ್ದು ಜ್ವರ ಬಂದ ತಕ್ಷಣವೇ ಮುಂಜಾಗ್ರತಾ ಕ್ರಮ ಹಾಗೂ ರಕ್ತ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕಿದೆ.

2015-16 ರಲ್ಲಿ  ಡೆಂಘೆ ಜ್ವರಕ್ಕೆ ಗುತ್ತಿಗಾರು ಗ್ರಾಮ ತತ್ತರಿಸಿತ್ತು. ಹಲವಾರು ಮಂದಿ ಡೆಂಘೆ ಜ್ವರದಿಂದ ಬಳಲಿದ್ದರು. ಆರೋಗ್ಯ ಇಲಾಖೆ ಆರಂಭದಲ್ಲಿ ಡೆಂಘೆ ಜ್ವರ ಇಲ್ಲವೆಂದು ಹೇಳಿತ್ತು, ಕೊನೆಗೆ ನಿಯಂತ್ರಣಕ್ಕೆ ಬಾರದಾಗಿತ್ತು. ಈ ಬಾರಿಯೂ ಮಳೆ ಹಾಗೂ ಬಿಸಿಲಿನ ವಾತಾವರಣ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ.

 

Advertisement

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು
June 26, 2025
9:54 PM
by: The Rural Mirror ಸುದ್ದಿಜಾಲ
ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |
June 26, 2025
9:43 PM
by: The Rural Mirror ಸುದ್ದಿಜಾಲ
ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group