ಸುಳ್ಯ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಡೆಂಘೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದೆ. ಇದರಲ್ಲಿ ಗುತ್ತಿಗಾರು , ಬಳ್ಪ ಪ್ರದೇಶದಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿದೆ. ಗುತ್ತಿಗಾರು ಸರಕಾರಿ ಆಸ್ಪತ್ರೆಗೆ ಗ್ರಾಮೀಣ ಭಾಗದಿಂದ ಜ್ವರದ ಲಕ್ಷಣಗಳಿಂದ ಬರುತ್ತಿದ್ದು ದಿನೇ ದಿನೇ ಜ್ವರ ಬಾಧಿತರ ಸಂಖ್ಯೆ ಹೆಚ್ಚಾಗುತ್ತಿದೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇಲಾಖೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದರೂ ಮಳೆ ಹಾಗೂ ಬಿಸಿಲಿನ ಕಾರಣದಿಂದ ಸೊಳ್ಳೆಗಳ ಉತ್ಪಾದನೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಹೇಳುತ್ತಾರೆ. ಈಗಾಗಲೇ ಗುತ್ತಿಗಾರಿನಲ್ಲಿ 2 ಜನರಿಗೆ ಡೆಂಘೆ ದೃಢಪಟ್ಟರೆ 10 ಕ್ಕೂ ಅಧಿಕ ಮಂದಿಯ ರಕ್ತದ ಸ್ಯಾಂಪಲ್ ಖಾಸಗಿಯಾಗಿ ಕಳುಹಿಸಲಾಗಿದೆ. ಖಾಸಗಿ ವೈದ್ಯರು ನಿನ್ನೆ ಹಾಗೂ ಇಂದು ಸೇರಿ ಒಟ್ಟು 4 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯ ಹಾಗೂ ಪುತ್ತೂರಿಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿದ್ದಾರೆ.
ಈಗ ಸಾರ್ವಜನಿಕರೇ ಎಚ್ಚರ ವಹಿಸಬೇಕಾಗಿದ್ದು ಜ್ವರ ಬಂದ ತಕ್ಷಣವೇ ಮುಂಜಾಗ್ರತಾ ಕ್ರಮ ಹಾಗೂ ರಕ್ತ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕಿದೆ.
2015-16 ರಲ್ಲಿ ಡೆಂಘೆ ಜ್ವರಕ್ಕೆ ಗುತ್ತಿಗಾರು ಗ್ರಾಮ ತತ್ತರಿಸಿತ್ತು. ಹಲವಾರು ಮಂದಿ ಡೆಂಘೆ ಜ್ವರದಿಂದ ಬಳಲಿದ್ದರು. ಆರೋಗ್ಯ ಇಲಾಖೆ ಆರಂಭದಲ್ಲಿ ಡೆಂಘೆ ಜ್ವರ ಇಲ್ಲವೆಂದು ಹೇಳಿತ್ತು, ಕೊನೆಗೆ ನಿಯಂತ್ರಣಕ್ಕೆ ಬಾರದಾಗಿತ್ತು. ಈ ಬಾರಿಯೂ ಮಳೆ ಹಾಗೂ ಬಿಸಿಲಿನ ವಾತಾವರಣ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…