Advertisement
ಸುದ್ದಿಗಳು

ಗುತ್ತಿಗಾರಿನಲ್ಲಿ ಹೆಚ್ಚಾಗುತ್ತಿದೆ ಡೆಂಘೆ ಪ್ರಕರಣ

Share

ಸುಳ್ಯ: ತಾಲೂಕಿನ ವಿವಿಧ ಗ್ರಾಮಗಳಲ್ಲಿ  ಡೆಂಘೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದೆ. ಇದರಲ್ಲಿ   ಗುತ್ತಿಗಾರು , ಬಳ್ಪ ಪ್ರದೇಶದಲ್ಲಿ  ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿದೆ. ಗುತ್ತಿಗಾರು ಸರಕಾರಿ ಆಸ್ಪತ್ರೆಗೆ ಗ್ರಾಮೀಣ ಭಾಗದಿಂದ ಜ್ವರದ ಲಕ್ಷಣಗಳಿಂದ ಬರುತ್ತಿದ್ದು ದಿನೇ ದಿನೇ ಜ್ವರ ಬಾಧಿತರ ಸಂಖ್ಯೆ ಹೆಚ್ಚಾಗುತ್ತಿದೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇಲಾಖೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದರೂ ಮಳೆ ಹಾಗೂ ಬಿಸಿಲಿನ ಕಾರಣದಿಂದ ಸೊಳ್ಳೆಗಳ ಉತ್ಪಾದನೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಹೇಳುತ್ತಾರೆ. ಈಗಾಗಲೇ ಗುತ್ತಿಗಾರಿನಲ್ಲಿ 2 ಜನರಿಗೆ ಡೆಂಘೆ ದೃಢಪಟ್ಟರೆ 10 ಕ್ಕೂ ಅಧಿಕ ಮಂದಿಯ ರಕ್ತದ ಸ್ಯಾಂಪಲ್ ಖಾಸಗಿಯಾಗಿ ಕಳುಹಿಸಲಾಗಿದೆ. ಖಾಸಗಿ ವೈದ್ಯರು ನಿನ್ನೆ ಹಾಗೂ ಇಂದು ಸೇರಿ ಒಟ್ಟು 4 ಮಂದಿಯನ್ನು  ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯ ಹಾಗೂ ಪುತ್ತೂರಿಗೆ ಹೆಚ್ಚಿನ ಚಿಕಿತ್ಸೆಗೆ  ಕಳುಹಿಸಿದ್ದಾರೆ.

ಈಗ ಸಾರ್ವಜನಿಕರೇ ಎಚ್ಚರ ವಹಿಸಬೇಕಾಗಿದ್ದು ಜ್ವರ ಬಂದ ತಕ್ಷಣವೇ ಮುಂಜಾಗ್ರತಾ ಕ್ರಮ ಹಾಗೂ ರಕ್ತ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕಿದೆ.

2015-16 ರಲ್ಲಿ  ಡೆಂಘೆ ಜ್ವರಕ್ಕೆ ಗುತ್ತಿಗಾರು ಗ್ರಾಮ ತತ್ತರಿಸಿತ್ತು. ಹಲವಾರು ಮಂದಿ ಡೆಂಘೆ ಜ್ವರದಿಂದ ಬಳಲಿದ್ದರು. ಆರೋಗ್ಯ ಇಲಾಖೆ ಆರಂಭದಲ್ಲಿ ಡೆಂಘೆ ಜ್ವರ ಇಲ್ಲವೆಂದು ಹೇಳಿತ್ತು, ಕೊನೆಗೆ ನಿಯಂತ್ರಣಕ್ಕೆ ಬಾರದಾಗಿತ್ತು. ಈ ಬಾರಿಯೂ ಮಳೆ ಹಾಗೂ ಬಿಸಿಲಿನ ವಾತಾವರಣ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

6 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

6 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago