ನಮ್ಮೂರ ಸುದ್ದಿ

ಗುತ್ತಿಗಾರು ಒಂದನೇ ತರಗತಿ ಆಂಗ್ಲಮಾಧ್ಯಮ ತರಗತಿ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುತ್ತಿಗಾರು: ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ಆಂಗ್ಲಮಾಧ್ಯಮ ತರಗತಿ ಉದ್ಘಾಟನೆ ಮತ್ತು ಪೋಷಕರ ಸಭೆ ಶನಿವಾರ  ನಡೆಯಿತು.

Advertisement
Advertisement

ಗುತ್ತಿಗಾರಿನ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲಮಾಧ್ಯಮ‌ ತರಗತಿಯನ್ನು ಉದ್ಘಾಟಿಸಿ‌ದ ಶಾಸಕ ಅಂಗಾರ, “ಮಕ್ಕಳಿಗೆ ಮೌಲ್ಯಯುತ, ಸಂಸ್ಕಾರಭರಿತ ಶಿಕ್ಷಣದ ಅವಶ್ಯಕತೆ ಇದ್ದು, ಶಿಕ್ಷಕರು ಈ ನಿಟ್ಟಿನಲ್ಲಿ ಪರಿಣತಿ ಪಡೆಯಬೇಕು ಎಂದರು.

ಮುಖ್ಯ ಅತಿಥಿಯಾಗಿ ‌ಮಾತನಾಡಿದ ಜಿ.ಪಂ ಸದಸ್ಯೆ ಆಶಾ ತಿಮ್ಮಪ್ಪ “ಪೋಷಕರಿಗೆ ಸರಕಾರಿ ಶಾಲೆಗಳ ಬಗ್ಗೆ ಅಭಿಮಾನ ಇರಬೇಕು. ಅಲ್ಲದೇ ಸರಕಾರ ಕೂಡಾ ಶಾಲೆಗಳಿಗೆ ಅವಶ್ಯಕ ಸೌಲಭ್ಯಗಳನ್ನು ನೀಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುತ್ತಿಗಾರು ಗ್ರಾ.ಪಂ ಅಧ್ಯಕ್ಷ ಅಚ್ಯುತ ಗುತ್ತಿಗಾರು ವಹಿಸಿದ್ದರು. ಗ್ರಾ.ಪಂ ಸದಸ್ಯ ವೆಂಕಟ್ ವಳಲಂಬೆ, ಉಪಾಧ್ಯಕ್ಷೆ ಸವಿತಾ ಕುಳ್ಳಂಪಾಡಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಬೆಳ್ಳಾರೆ , ಅರೆಭಾಷೆ ಅಕಾಡೆಮಿ ಸದಸ್ಯ ದಿನೇಶ್ ಹಾಲೆಮಜಲು ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ತೇಜಮ್ಮ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ವೇದಿಕೆಯಲ್ಲಿ ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್, ನಿರ್ದೇಶಕ ಬಿ.ಕೆ.ಬೆಳ್ಯಪ್ಪ ಗೌಡ, ಮಾಜಿ ಜಿ.ಪಂ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಿಂಗರಾಜ್ ಜತ್ತಿಲ, ಶಾಲಾ ಕಟ್ಟಡ ಸಮಿತಿ ಅಧ್ಯಕ್ಷ ಶಿವರಾಮ‌ ಕರುವಜೆ ಉಪಸ್ಥಿತರಿದ್ದರು.

Advertisement

ಎಸ್.ಡಿ.ಎಂ.ಸಿ ಅಧ್ಯಕ್ಷ ಎನ್.ಟಿ. ಹೊನ್ನಪ್ಪ ಗೌಡ ಸ್ವಾಗತಿಸಿ , ಮುಖ್ಯ ಶಿಕ್ಷಕಿ ಕಮಲಾಕ್ಷಿ.ಪಿ ವಂದಿಸಿದರು. ಶಿಕ್ಷಕ ಶಶಿಧರ ಮಾವಿನಕಟ್ಟೆ ನಿರೂಪಿಸಿದರು.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

1 hour ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

2 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

2 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

10 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

11 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

11 hours ago