Advertisement
ಸುದ್ದಿಗಳು

ಗುತ್ತಿಗಾರು ಕಮಿಲ ಬಳ್ಪ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

Share

ಗುತ್ತಿಗಾರು: ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಭಾನುವಾರ ಸಂಜೆ ನೆರವೇರಿತು. ಶಾಸಕ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.

1.20 ಕೋಟಿ ರೂಪಾಯಿಯಲ್ಲಿ  ಅಭಿವೃದ್ಧಿಗೊಳ್ಳುವ ರಸ್ತೆಯು  ಗುತ್ತಿಗಾರಿನಿಂದ ದೇವಸ್ಯದವರೆಗೆ  ಲೋಕೊಪಯೋಗಿ ಇಲಾಖೆಯ ಮೂಲಕ ಕಾಂಕ್ರೀಟೀಕರಣ ಹಾಗೂ ಕಮಿಲ ಶಾಲೆಯವರೆಗೆ ಜಿಪಂ ಮೂಲಕ ಕಾಂಕ್ರೀಟೀಕರಣ ಹಾಗೂ ಕಮಿಲದಲ್ಲಿ  ಕಾಂಕ್ರೀಟೀಕರಣ ಮಾಡಿ ನಂತರ ಉಳಿಕೆ ಭಾಗವನ್ನು ಸುಗ್ರಾಮ ಯೋಜನೆಯ ಮೂಲಕ ಅಥವಾ ಬೇರೆ ಯಾವುದಾದರೂ ಅನುದಾನದ ಮೂಲಕ ದುರಸ್ತಿ ಮಾಡಿಸುವುದಾಗಿ ಶಾಸಕ  ಅಂಗಾರ  ಹೇಳಿದರು.

ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಅಂಗಾರ, ಗ್ರಾಮಗಳ ಅಭಿವೃದ್ಧಿ ಕಡೆಗೆ ಸಾಕಷ್ಟು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಆದರೆ ಯಾವ ಯೋಜನೆಗಳು ಕೂಡಾ ತಾತ್ಕಾಲಿಕವಾಗಿ ಆಗಿರದೆ ಶಾಶ್ವತವಾಗಿರಬೇಕು ಎಂಬ ಕಾರಣಕ್ಕೆ ಕೆಲವೊಮ್ಮೆ ವಿಳಂಬ ಆಗಬಹುದು.ಆದರೆ ಅದನ್ನೇ ಗೇಲಿ ಮಾಡುವುದು ಹಾಗೂ ಅಪಹಾಸ್ಯ ಮಾಡುವುದು ಸಮಂಜಸವಲ್ಲ ಎಂದ ಅವರು ಅಭಿವೃದ್ಧಿ ಮಾಡುವುದಕ್ಕೆ ನಾವೇ ಆಗಬೇಕಾಗಿದೆ. ಹೀಗಾಗಿ ಏನೇ ಟೀಕೆಗಳು ಬಂದರೂ ಅಭಿವೃದ್ಧಿ ಕಾರ್ಯದ ಮೂಲಕವೇ ಉತ್ತರ ನೀಡಲಾಗುವುದು ಎಂದು ಅಂಗಾರ ಹೇಳಿದರು.

ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿ, ಅನೇಕ ಸಮಯದ ಬೇಡಿಕೆಯಾಗಿದ್ದ ಕಮಿಲ-ಬಳ್ಪ ರಸ್ತೆ ಅಭಿವೃದ್ದಿ ಮಾತ್ರವಲ್ಲ ಶಾಶ್ವತವಾದ ಕಾಮಗಾರಿಯನ್ನು  ಈಗ ಶಾಸಕರು ಅನುದಾನ ನೀಡಿ ಮಾಡಲಾಗುತ್ತಿದೆ. ಹೀಗಾಗಿ ಕ್ಷುಲ್ಲಕ ಟೀಕೆ, ಅಬಿವೃದ್ದಿ ಕಾರ್ಯಗಳಿಗೆ ಅಡ್ಡ ಮಾಡುವುದರ ಬದಲಾಗಿ ಸಹಕಾರ ಮಾಡಬೇಕಿದೆ ಎಂದರು.

ಈ ಸಂದರ್ಭ  ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾ.ಪಂ. ಸದಸ್ಯೆ ಯಶೋಧ ಬಾಳೆಗುಡ್ಡೆ, ಗ್ರಾ. ಪಂ. ಅಧ್ಯಕ್ಷ ಅಚ್ಚುತ ಗುತ್ತಿಗಾರು,  ಉಪಾಧ್ಯಕ್ಷೆ ಸವಿತಾ ಕುಳ್ಳಂಪಾಡಿ,  ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ, ಗುತ್ತಿಗಾರು ಗ್ರಾ.ಪಂ. ಸದಸ್ಯರಾದ ಜಯಪ್ರಕಾಶ್ ಮೊಗ್ರ,   ರಾಕೇಶ್ ಮೆಟ್ಟಿನಡ್ಕ, ಶ್ರೀದೇವಿ ಕೊಂಬೆಟ್ಟು, ಭಾಗೀರಥಿ ಕಾಜಿಮಡ್ಕ, ಯಮಿತಾ ಪೂರ್ಣಚಂದ್ರ , ಜಿಪಂ ಇಂಜಿನಿಯರ್ , ದೇವಿಪ್ರಸಾದ್ ಚಿಕ್ಮುಳಿ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

7 minutes ago

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

1 day ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

1 day ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago