Advertisement
ಸುದ್ದಿಗಳು

ಗುತ್ತಿಗಾರು ಕಮಿಲ ಬಳ್ಪ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

Share

ಗುತ್ತಿಗಾರು: ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಭಾನುವಾರ ಸಂಜೆ ನೆರವೇರಿತು. ಶಾಸಕ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.

1.20 ಕೋಟಿ ರೂಪಾಯಿಯಲ್ಲಿ  ಅಭಿವೃದ್ಧಿಗೊಳ್ಳುವ ರಸ್ತೆಯು  ಗುತ್ತಿಗಾರಿನಿಂದ ದೇವಸ್ಯದವರೆಗೆ  ಲೋಕೊಪಯೋಗಿ ಇಲಾಖೆಯ ಮೂಲಕ ಕಾಂಕ್ರೀಟೀಕರಣ ಹಾಗೂ ಕಮಿಲ ಶಾಲೆಯವರೆಗೆ ಜಿಪಂ ಮೂಲಕ ಕಾಂಕ್ರೀಟೀಕರಣ ಹಾಗೂ ಕಮಿಲದಲ್ಲಿ  ಕಾಂಕ್ರೀಟೀಕರಣ ಮಾಡಿ ನಂತರ ಉಳಿಕೆ ಭಾಗವನ್ನು ಸುಗ್ರಾಮ ಯೋಜನೆಯ ಮೂಲಕ ಅಥವಾ ಬೇರೆ ಯಾವುದಾದರೂ ಅನುದಾನದ ಮೂಲಕ ದುರಸ್ತಿ ಮಾಡಿಸುವುದಾಗಿ ಶಾಸಕ  ಅಂಗಾರ  ಹೇಳಿದರು.

ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಅಂಗಾರ, ಗ್ರಾಮಗಳ ಅಭಿವೃದ್ಧಿ ಕಡೆಗೆ ಸಾಕಷ್ಟು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಆದರೆ ಯಾವ ಯೋಜನೆಗಳು ಕೂಡಾ ತಾತ್ಕಾಲಿಕವಾಗಿ ಆಗಿರದೆ ಶಾಶ್ವತವಾಗಿರಬೇಕು ಎಂಬ ಕಾರಣಕ್ಕೆ ಕೆಲವೊಮ್ಮೆ ವಿಳಂಬ ಆಗಬಹುದು.ಆದರೆ ಅದನ್ನೇ ಗೇಲಿ ಮಾಡುವುದು ಹಾಗೂ ಅಪಹಾಸ್ಯ ಮಾಡುವುದು ಸಮಂಜಸವಲ್ಲ ಎಂದ ಅವರು ಅಭಿವೃದ್ಧಿ ಮಾಡುವುದಕ್ಕೆ ನಾವೇ ಆಗಬೇಕಾಗಿದೆ. ಹೀಗಾಗಿ ಏನೇ ಟೀಕೆಗಳು ಬಂದರೂ ಅಭಿವೃದ್ಧಿ ಕಾರ್ಯದ ಮೂಲಕವೇ ಉತ್ತರ ನೀಡಲಾಗುವುದು ಎಂದು ಅಂಗಾರ ಹೇಳಿದರು.

ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿ, ಅನೇಕ ಸಮಯದ ಬೇಡಿಕೆಯಾಗಿದ್ದ ಕಮಿಲ-ಬಳ್ಪ ರಸ್ತೆ ಅಭಿವೃದ್ದಿ ಮಾತ್ರವಲ್ಲ ಶಾಶ್ವತವಾದ ಕಾಮಗಾರಿಯನ್ನು  ಈಗ ಶಾಸಕರು ಅನುದಾನ ನೀಡಿ ಮಾಡಲಾಗುತ್ತಿದೆ. ಹೀಗಾಗಿ ಕ್ಷುಲ್ಲಕ ಟೀಕೆ, ಅಬಿವೃದ್ದಿ ಕಾರ್ಯಗಳಿಗೆ ಅಡ್ಡ ಮಾಡುವುದರ ಬದಲಾಗಿ ಸಹಕಾರ ಮಾಡಬೇಕಿದೆ ಎಂದರು.

ಈ ಸಂದರ್ಭ  ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾ.ಪಂ. ಸದಸ್ಯೆ ಯಶೋಧ ಬಾಳೆಗುಡ್ಡೆ, ಗ್ರಾ. ಪಂ. ಅಧ್ಯಕ್ಷ ಅಚ್ಚುತ ಗುತ್ತಿಗಾರು,  ಉಪಾಧ್ಯಕ್ಷೆ ಸವಿತಾ ಕುಳ್ಳಂಪಾಡಿ,  ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ, ಗುತ್ತಿಗಾರು ಗ್ರಾ.ಪಂ. ಸದಸ್ಯರಾದ ಜಯಪ್ರಕಾಶ್ ಮೊಗ್ರ,   ರಾಕೇಶ್ ಮೆಟ್ಟಿನಡ್ಕ, ಶ್ರೀದೇವಿ ಕೊಂಬೆಟ್ಟು, ಭಾಗೀರಥಿ ಕಾಜಿಮಡ್ಕ, ಯಮಿತಾ ಪೂರ್ಣಚಂದ್ರ , ಜಿಪಂ ಇಂಜಿನಿಯರ್ , ದೇವಿಪ್ರಸಾದ್ ಚಿಕ್ಮುಳಿ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

2 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

12 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

13 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

13 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

19 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

21 hours ago