Advertisement
ಸುದ್ದಿಗಳು

ಗುತ್ತಿಗಾರು : ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ದಿ ಪಂದ್ಯಾಟ

Share
ಗುತ್ತಿಗಾರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇದರ ಆತಿಥ್ಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ದ.ಕ . ಇದರ ವತಿಯಿಂದ ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ದಿ ಪಂದ್ಯಾಟವು ಜರುಗಿತು.
ದೈಹಿಕ ಶಿಕ್ಷಣ ಪರಿವೀಕ್ಷಕ ಲಕ್ಷ್ಮೀಶ ರೈ .ಕೆ  ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಗುತ್ತಿಗಾರು ಗ್ರಾಪಂ ಅಧ್ಯಕ್ಷ   ಅಚ್ಯುತ ಗುತ್ತಿಗಾರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹದೇವ್  ಆಗಮಿಸಿದ್ದರು.  ವೇದಿಕೆಯಲ್ಲಿ ಗ್ರಾಪಂ ಸದಸ್ಯೆ ಶ್ರೀದೇವಿ ಕೊಂಬೊಟ್ಟು ,
ವಿರಮಾರುತಿ ಸ್ಫೋಟ್ಸ್ ಕ್ಲಬ್ ವಿಜೇಶ್ ಹಿರಿಯಡ್ಕ ಉಪಸ್ಥಿತರಿದ್ದರು.
    ಸುಳ್ಯ ತಾಲೂಕಿನ ವಿವಿಧ ಶಾಲೆಗಳು ಈ ಕ್ರೀಡಾ ಕೂಟದಲ್ಲಿ ಸ್ಪೂರ್ತಿಯಿಂದ ಭಾಗವಹಿಸಿದ್ದು ಬಾಲಕರ ವಿಭಾಗದಲ್ಲಿ ಜ್ಞಾನದೀಪ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಎಲಿಮಲೆ ಪ್ರಥಮ ಸ್ಥಾನ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಸರಕಾರಿ  ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಪ್ರಥಮ ಸ್ಥಾನ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಕುಳಿ ದ್ವಿತೀಯ  ಸ್ಥಾನ ಗಳಿಸಿಕೊಂಡಿತು.
     ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಜಯಂತಿ ಅಮೆ ವಹಿಸಿದ್ದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಲಕ್ಷ್ಮೀಶ ರೈ .ಕೆ, ಗುತ್ತಿಗಾರು ಗ್ರಾಪಂ ಅಧ್ಯಕ್ಷ   ಅಚ್ಯುತ ಗುತ್ತಿಗಾರು , ಎಲ್.ಕೆ.ಜಿ&ಯು.ಕೆ.ಜಿ  ಸಮಿತಿ ಅಧ್ಯಕ್ಷ ಕುಲಶ್ರೀ ಬಾಕಿಲ ಉಪಸ್ಥಿತರಿದ್ದು ವಿಜೇತರಿಗೆ ಬಹುಮಾನ ವಿತರಿಸಿದರು.
    ಕಮಲಾಕ್ಷಿ ಪಿ. ಮುಖ್ಯ ಶಿಕ್ಷಕರು ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ಮುತ್ಲಾಜೆ ವಂದಿಸಿದರು. ಶಶಿಧರ ಮಾವಿನಕಟ್ಟೆ  ಕಾರ್ಯಕ್ರಮವನ್ನು ನಿರೂಪಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

10 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

11 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

14 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

18 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

18 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago