ಗುತ್ತಿಗಾರು: ಗುತ್ತಿಗಾರಿನ ಪೇಟೆಯಲ್ಲಿ ಕೆಸರಿನ ಸಿಂಚನ ಉಚಿತವಾಯ್ತು ಇಂದು…!
ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯುದ್ದಕ್ಕೂ ಕೆಸರೇ ತುಂಬಿ ಪೇಟೆಗೆ ಬಂದವರೆಲ್ಲಾ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ ಕಾರಣವಾದದ್ದು ಖಾಸಗಿ ವ್ಯಕ್ತಿಯೊಬ್ಬರು ಮಣ್ಣು ಸಾಗಾಟ ಮಾಡಿದ್ದು.
ಗುತ್ತಿಗಾರು ಪ್ರಾ.ಕೃ.ಸಂಘದ ಬಳಿಯಿರುವ ಗುಡ್ಡದಿಂದ ವ್ಯಕ್ತಿಯೋರ್ವರು ಟಿಪ್ಪರ್ ಮೂಲಕ ಮಣ್ಣು ಸಾಗಾಟ ಮಾಡಿ ರಸ್ತೆಯುದ್ದಕ್ಕೂ ಮಣ್ಣು ಚೆಲ್ಲಿತ್ತು. ರಾತ್ರಿ ಈ ಕೆಲಸ ನಡೆಸಿದ್ದು ಬೆಳಿಗ್ಗೆ ಸುರಿದು ತುಂತುರು ಮಳೆಗೆ ಮಣ್ಣು ಕೆಸರಾಗಿ ಪರಿವರ್ತನೆಗೊಂಡು, ರಸ್ತೆಯುದ್ದಕ್ಕೂ ಪ್ರಯಾಣಿಕರಿಗೆ, ದ್ವಿಚಕ್ರ ಸವಾರರಿಗೆ, ಸಾರ್ವಜನಿಕರಿಗೆ ಅಭಿಷೇಕ ಆಯಿತು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…