ಗುತ್ತಿಗಾರು: ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಜಲಾಮೃತ ಯೋಜನೆಯಡಿಯಲ್ಲಿ ಶಾಲೆಯ ಪರಿಸರ ಸಂಘದ ಸಹಯೋಗದೊಂದಿಗೆ ಮನೆಮನೆ ಇಂಗುಗುಂಡಿ ಅಭಿಯಾನ ನಡೆಯಿತು. ಕಾರ್ಯಕ್ರಮವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ದಾಮ್ಲೆ ಉದ್ಘಾಟಿಸಿದರು.
ಬಳಿಕ ಇಂಗುಗುಂಡಿ ಹಾಗೂ ಜಲಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜೊತೆಗೆ ಪ್ರತೀ ಮನೆಯಲ್ಲೂ ವಿದ್ಯಾರ್ಥಿಗಳು ಇಂಗುಗುಂಡಿ ಮಾಡಿ ಜಲಸಂರಕ್ಷಣೆಯತ್ತ ಮನಸ್ಸು ಮಾಡಲು ಕರೆ ನೀಡಿದರು. ಈ ಸಂದರ್ಭ ಇಂಜಿನಿಯರ್ ಹಾಗೂ ಸಾಮಾಜಿಕ ಕಾರ್ಯಕರ್ತ ಕಾರ್ತಿಕೇಯನ್, ಸುಳ್ಯನ್ಯೂಸ್.ಕಾಂ ಸಂಪಾದಕ ಮಹೇಶ್ ಪುಚ್ಚಪ್ಪಾಡಿ, ಶಾಲಾ ಅಧ್ಯಾಪಕಿ ಚೈತ್ರಾ ಉಪಸ್ಥಿತರಿದ್ದರು.
ಇದೇ ಸಂದರ್ಭ ಎಲ್ಲಾ ವಿದ್ಯಾರ್ಥಿಗಳು ಇಂಗುಗುಂಡಿ ಮಾಡುವ ಭರವಸೆ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯ ನೆಲ್ಸನ್ ಪ್ರಸ್ತಾವನೆಗೈದರು. ಅಧ್ಯಾಪಕ ಗಿರೀಶ್ ಸ್ವಾಗತಿಸಿ ಸುನಿಲ್ ಕುಮಾರ್ ವಂದಿಸಿದರು.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…