ಗುತ್ತಿಗಾರು: ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಜಲಾಮೃತ ಯೋಜನೆಯಡಿಯಲ್ಲಿ ಶಾಲೆಯ ಪರಿಸರ ಸಂಘದ ಸಹಯೋಗದೊಂದಿಗೆ ಮನೆಮನೆ ಇಂಗುಗುಂಡಿ ಅಭಿಯಾನ ನಡೆಯಿತು. ಕಾರ್ಯಕ್ರಮವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ದಾಮ್ಲೆ ಉದ್ಘಾಟಿಸಿದರು.
ಬಳಿಕ ಇಂಗುಗುಂಡಿ ಹಾಗೂ ಜಲಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜೊತೆಗೆ ಪ್ರತೀ ಮನೆಯಲ್ಲೂ ವಿದ್ಯಾರ್ಥಿಗಳು ಇಂಗುಗುಂಡಿ ಮಾಡಿ ಜಲಸಂರಕ್ಷಣೆಯತ್ತ ಮನಸ್ಸು ಮಾಡಲು ಕರೆ ನೀಡಿದರು. ಈ ಸಂದರ್ಭ ಇಂಜಿನಿಯರ್ ಹಾಗೂ ಸಾಮಾಜಿಕ ಕಾರ್ಯಕರ್ತ ಕಾರ್ತಿಕೇಯನ್, ಸುಳ್ಯನ್ಯೂಸ್.ಕಾಂ ಸಂಪಾದಕ ಮಹೇಶ್ ಪುಚ್ಚಪ್ಪಾಡಿ, ಶಾಲಾ ಅಧ್ಯಾಪಕಿ ಚೈತ್ರಾ ಉಪಸ್ಥಿತರಿದ್ದರು.
ಇದೇ ಸಂದರ್ಭ ಎಲ್ಲಾ ವಿದ್ಯಾರ್ಥಿಗಳು ಇಂಗುಗುಂಡಿ ಮಾಡುವ ಭರವಸೆ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯ ನೆಲ್ಸನ್ ಪ್ರಸ್ತಾವನೆಗೈದರು. ಅಧ್ಯಾಪಕ ಗಿರೀಶ್ ಸ್ವಾಗತಿಸಿ ಸುನಿಲ್ ಕುಮಾರ್ ವಂದಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…