ಸುಳ್ಯ: ಗುತ್ತಿಗಾರು ಲಯನ್ಸ್ ಕ್ಲಬ್ ಗೆ ಜಿಲ್ಲಾ ಗವರ್ನರ್ ರೋನಾಲ್ಡ್ ಗೋಮ್ಸ್ ಅಧಿಕೃತ ಭೇಟಿ ನೀಡಿದರು. ಲಯನ್ಸ್ ಸೇವಾ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುತ್ತಿಗಾರು ಲಯನ್ಸ್ ಕ್ಲಬ್ ನ ಅಧ್ಯಕ್ಷ ಮೋಹನ್ ಕೆ ವಹಿಸಿದ್ದರು.
ವೇದಿಕೆಯಲ್ಲಿ ಕಾರ್ಯದರ್ಶಿ ಲಿಜೋ ಜೋಸ್, ಕೋಶಾಧಿಕಾರಿ ಕುಶಾಲಪ್ಪ ಟಿ, ಪ್ರಾಂತೀಯ ಅಧ್ಯಕ್ಷ ಕೃಷ್ಣ ಪ್ರಶಾಂತ್,ವಲಯಾಧ್ಯಕ್ಷ ರುಗಳಾದ ಬಿಟ್ಟಿ ಬಿ ನೆಡುವಿಲಂ, ರೇಣುಕಾ ಸದಾನಂದ ಜಾಕೆ, ಆನಂದ ರೈ, ಜಿಲ್ಲಾ ಸಂಪುಟ ಖಜಾಂಜಿ ಹರೀಶ್ ಶೆಟ್ಟಿ, ಲಯನ್ಸ್ ಗಳಾದ ಡಾ. ಪ್ರಕಾಶ್ ಡಿಸೋಜಾ, ಸುದರ್ಶನ್ ಪಡಿಯಾರ್, ಶರಶ್ಚಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಚಿಕಿತ್ಸಾ ಮತ್ತು ಶಿಕ್ಷಣ ಸಹಾಯಧನವನ್ನು ವಿತರಿಲಸಾಯಿತು. ಉತ್ತಮ ಸೇವೆಯನ್ನು ನೀಡುತ್ತಿರುವ ಗುತ್ತಿಗಾರು ಮೆಸ್ಕಾಂನ ವೆಂಕಟ್ರಮಣ ಮೊಟ್ನೂರು, ಸುಧಾಕರ ಪಂಜಿಪಳ್ಳ, ರವೀಂದ್ರ ಕುಚ್ಚಾಲ, ಪಾಲಾಕ್ಷ ಹೊಳೆನರಸೀಪುರ, ದಿನೇಶ್ ಪೂಜಾರಿ ಕೋಡಿ ಇವರುಗಳನ್ನು ಸನ್ಮಾನಿಸಲಾಯಿತು. ಮೋಹನ್ ಕೆ ಸ್ವಾಗತಿಸಿ, ಲಿಜೋ ಜೋಸ್ ವರದಿ ವಾಚಿಸಿದರು. ಕುಶಾಲಪ್ಪ ಟಿ ವಂದಿಸಿದರು.
ಬಸ್ ತಂಗುದಾಣ ಕೊಡುಗೆ: ಗುತ್ತಿಗಾರು ಲಯನ್ಸ್ ಕ್ಲಬ್ ವತಿಯಿಂದ ಗುತ್ತಿಗಾರು ಗ್ರಾಮದ ಕಾಜಿಮಡ್ಕ ಎಂಬಲ್ಲಿ ಹೊಸ ಬಸ್ ತಂಗುದಾಣವನ್ನು ಕ್ಲಬ್ ವತಿಯಿಂದ ಕೊಡುಗೆಯಾಗಿ ನೀಡಲಾಯಿತು. ಜಿಲ್ಲಾ ಗವರ್ನರ್ ರೋನಾಲ್ಡ್ ಗೋಮ್ಸ್ ನೂತನ ತಂಗುದಾಣವನ್ನು ಉದ್ಘಾಟಿಸಿದರು .
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…