ಸುಳ್ಯ: ಲಾಕ್ಡೌನ್ ಹಿನ್ನೆಲೆಯಲ್ಲಿ ಕೃಷಿ ವಸ್ತುಗಳ ಮಾರಾಟಕ್ಕೆ ಅವಕಾಶವಿಲ್ಲದೆ ಕೃಷಿಕರು ಸಂಕಷ್ಟಕ್ಕೆ ಎದುರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೃಷಿಕರಿಗೆ ನೆರವಾಗಲು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂದೆ ಬಂದಿದೆ. ಸಹಕಾರಿ ಸಂಘದ ಸದಸ್ಯರಿಂದ ಹಾಗೂ ಕೃಷಿಕರಿಂದ ಗೇರುಬೀಜ ಖರೀದಿಸಲು ನಿರ್ಧರಿಸಿದ್ದು ಎ.13 ರಿಂದ ಖರೀದಿ ನಡೆಯಲಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಎ.13 ರಿಂದ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ತನಕ ದೇವಚಳ್ಳ ,ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮದ ಸಹಕಾರಿ ಸಂಘದ ಸದಸ್ಯರುಗಳಿಗೆ ಹಾಗೂ ರೈತರಿಂದ ಖರೀದಿ ನಡೆಯಲಿದೆ. ಸದ್ಯ ಕೆ.ಜಿ ಗೆ ಗರಿಷ್ಟ 70 ರೂಪಾಯಿಯಂತೆ ನೀಡುವುದೆಂದು ಸಂಘದ ಆಡಳಿತ ಮಂಡಳಿಯವರು ತೀರ್ಮಾನ ಮಾಡಿದೆ.
ಗೇರುಬೀಜ ಖರೀದಿ ಬಗ್ಗೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೇತೃತ್ವದಲ್ಲಿ ನಿರ್ದೇಶಕರುಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಅವರು ಸಭೆ ನಡೆಸಿ ಕೃಷಿಕರಿಗೆ ನೆರವಾಗುವ ವಿಶೇಷ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಮೂಲಕ ಸಹಕಾರಿ ಸಂಘವು ಮಾದರಿಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…
ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ ಆತಂಕದ ಭವಿಷ್ಯವನ್ನು ಎದುರಿಸುತ್ತಿರುವ…