ಸುಳ್ಯ: ಲಾಕ್ಡೌನ್ ಹಿನ್ನೆಲೆಯಲ್ಲಿ ಕೃಷಿ ವಸ್ತುಗಳ ಮಾರಾಟಕ್ಕೆ ಅವಕಾಶವಿಲ್ಲದೆ ಕೃಷಿಕರು ಸಂಕಷ್ಟಕ್ಕೆ ಎದುರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೃಷಿಕರಿಗೆ ನೆರವಾಗಲು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂದೆ ಬಂದಿದೆ. ಸಹಕಾರಿ ಸಂಘದ ಸದಸ್ಯರಿಂದ ಹಾಗೂ ಕೃಷಿಕರಿಂದ ಗೇರುಬೀಜ ಖರೀದಿಸಲು ನಿರ್ಧರಿಸಿದ್ದು ಎ.13 ರಿಂದ ಖರೀದಿ ನಡೆಯಲಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಎ.13 ರಿಂದ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ತನಕ ದೇವಚಳ್ಳ ,ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮದ ಸಹಕಾರಿ ಸಂಘದ ಸದಸ್ಯರುಗಳಿಗೆ ಹಾಗೂ ರೈತರಿಂದ ಖರೀದಿ ನಡೆಯಲಿದೆ. ಸದ್ಯ ಕೆ.ಜಿ ಗೆ ಗರಿಷ್ಟ 70 ರೂಪಾಯಿಯಂತೆ ನೀಡುವುದೆಂದು ಸಂಘದ ಆಡಳಿತ ಮಂಡಳಿಯವರು ತೀರ್ಮಾನ ಮಾಡಿದೆ.
ಗೇರುಬೀಜ ಖರೀದಿ ಬಗ್ಗೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೇತೃತ್ವದಲ್ಲಿ ನಿರ್ದೇಶಕರುಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಅವರು ಸಭೆ ನಡೆಸಿ ಕೃಷಿಕರಿಗೆ ನೆರವಾಗುವ ವಿಶೇಷ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಮೂಲಕ ಸಹಕಾರಿ ಸಂಘವು ಮಾದರಿಯಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…