ಸುಳ್ಯ: ಲಾಕ್ಡೌನ್ ಹಿನ್ನೆಲೆಯಲ್ಲಿ ಕೃಷಿ ವಸ್ತುಗಳ ಮಾರಾಟಕ್ಕೆ ಅವಕಾಶವಿಲ್ಲದೆ ಕೃಷಿಕರು ಸಂಕಷ್ಟಕ್ಕೆ ಎದುರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೃಷಿಕರಿಗೆ ನೆರವಾಗಲು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂದೆ ಬಂದಿದೆ. ಸಹಕಾರಿ ಸಂಘದ ಸದಸ್ಯರಿಂದ ಹಾಗೂ ಕೃಷಿಕರಿಂದ ಗೇರುಬೀಜ ಖರೀದಿಸಲು ನಿರ್ಧರಿಸಿದ್ದು ಎ.13 ರಿಂದ ಖರೀದಿ ನಡೆಯಲಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಎ.13 ರಿಂದ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ತನಕ ದೇವಚಳ್ಳ ,ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮದ ಸಹಕಾರಿ ಸಂಘದ ಸದಸ್ಯರುಗಳಿಗೆ ಹಾಗೂ ರೈತರಿಂದ ಖರೀದಿ ನಡೆಯಲಿದೆ. ಸದ್ಯ ಕೆ.ಜಿ ಗೆ ಗರಿಷ್ಟ 70 ರೂಪಾಯಿಯಂತೆ ನೀಡುವುದೆಂದು ಸಂಘದ ಆಡಳಿತ ಮಂಡಳಿಯವರು ತೀರ್ಮಾನ ಮಾಡಿದೆ.
ಗೇರುಬೀಜ ಖರೀದಿ ಬಗ್ಗೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೇತೃತ್ವದಲ್ಲಿ ನಿರ್ದೇಶಕರುಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಅವರು ಸಭೆ ನಡೆಸಿ ಕೃಷಿಕರಿಗೆ ನೆರವಾಗುವ ವಿಶೇಷ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಮೂಲಕ ಸಹಕಾರಿ ಸಂಘವು ಮಾದರಿಯಾಗಿದೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…