ಸುಳ್ಯ: ಲಾಕ್ಡೌನ್ ಹಿನ್ನೆಲೆಯಲ್ಲಿ ಕೃಷಿ ವಸ್ತುಗಳ ಮಾರಾಟಕ್ಕೆ ಅವಕಾಶವಿಲ್ಲದೆ ಕೃಷಿಕರು ಸಂಕಷ್ಟಕ್ಕೆ ಎದುರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೃಷಿಕರಿಗೆ ನೆರವಾಗಲು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂದೆ ಬಂದಿದೆ. ಸಹಕಾರಿ ಸಂಘದ ಸದಸ್ಯರಿಂದ ಹಾಗೂ ಕೃಷಿಕರಿಂದ ಗೇರುಬೀಜ ಖರೀದಿಸಲು ನಿರ್ಧರಿಸಿದ್ದು ಎ.13 ರಿಂದ ಖರೀದಿ ನಡೆಯಲಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಎ.13 ರಿಂದ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ತನಕ ದೇವಚಳ್ಳ ,ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮದ ಸಹಕಾರಿ ಸಂಘದ ಸದಸ್ಯರುಗಳಿಗೆ ಹಾಗೂ ರೈತರಿಂದ ಖರೀದಿ ನಡೆಯಲಿದೆ. ಸದ್ಯ ಕೆ.ಜಿ ಗೆ ಗರಿಷ್ಟ 70 ರೂಪಾಯಿಯಂತೆ ನೀಡುವುದೆಂದು ಸಂಘದ ಆಡಳಿತ ಮಂಡಳಿಯವರು ತೀರ್ಮಾನ ಮಾಡಿದೆ.
ಗೇರುಬೀಜ ಖರೀದಿ ಬಗ್ಗೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೇತೃತ್ವದಲ್ಲಿ ನಿರ್ದೇಶಕರುಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಅವರು ಸಭೆ ನಡೆಸಿ ಕೃಷಿಕರಿಗೆ ನೆರವಾಗುವ ವಿಶೇಷ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಮೂಲಕ ಸಹಕಾರಿ ಸಂಘವು ಮಾದರಿಯಾಗಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…