Advertisement
ಸುದ್ದಿಗಳು

ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆ : 1.01 ಕೋಟಿ ಲಾಭ – ಶೇ.6 ಡಿವಿಡೆಂಡ್ ಘೋಷಣೆ

Share

ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಶನಿವಾರ ಸಂಘದ ಆವರಣದಲ್ಲಿ  ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ ವಹಿಸಿದ್ದರು. ಸಂಘವು ಸದ್ರಿ ವರ್ಷದಲ್ಲಿ  1, 01,59,122 ರೂಪಾಯಿ ಲಾಭ ಗಳಿಸಿದ್ದು ಸದಸ್ಯರಿಗೆ ಶೇ.6 ಡಿವಿಡೆಂಡ್ ಘೋಷಣೆ ಮಾಡಲಾಯಿತು.

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಒಟ್ಟು 5503 ಸದಸ್ಯರಿದ್ದು ಒಟ್ಟು 8.04 ಕೋಟಿ ಪಾಲುಬಂಡವಾಳ ಹೊಂದಿದೆ. ವರ್ಷಾಂತ್ಯದಲ್ಲಿ ಒಟ್ಟು 308.63 ಕೋಟಿ ವ್ಯವಹಾರ ನಡೆಸಿ  1.01 ಕೋಟಿ ರೂಪಾಯಿ ಲಾಭ ಗಳಿಸಿದೆ.

ರಸಗೊಬ್ಬರ , ಕೃಷಿ ಬಳಕೆ ಮಾರಾಟ ಇತ್ಯಾದಿಗಳಿಂದ ಒಟ್ಟು92.41 ಲಕ್ಷ ರೂಪಾಯಿ ವ್ಯವಹಾರ ನಡೆಸಿ 7.06 ಲಕ್ಷ ರೂಪಾಯಿ ಲಾಭ ಗಳಿಸಿದ್ದರೆ, ಪೆಟ್ರೋಲಿಯಂ ವ್ಯವಹಾರದಲ್ಲಿ ಒಟ್ಟು 8.89 ಕೋಟಿ ರೂಪಾಯಿ ವ್ಯವಹಾರ ನಡೆಸಿ 23.73 ಲಕ್ಷ ರೂಪಾಯಿ ಲಾಭ ಗಳಿಸಿದೆ. ಸಂಘದ 1612 ಮಂದಿ ಸದಸ್ಯರು ಸಾಲಾ ಮನ್ನಾಕ್ಕೆ ಅರ್ಹತೆ ಪಡೆದಿದ್ದಾರೆ.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷೆ ಎಂ.ಡಿ ಮಂಜುಳ ಮುತ್ಲಾಜೆ, ನಿರ್ದೇಶಕರುಗಳಾದ ಬಿ.ಕೆ ಬೆಳ್ಯಪ್ಪ ಗೌಡ, ಭರತ್ ಮುಂಡೋಡಿ, ಕೃಷ್ಣಯ್ಯ ಮೂಲೆತೋಟ, ದಿನೇಶ್ ಕೆ ಸರಸ್ವತಿ ಮಹಲ್, ಆನಂದ ಕೆಂಬಾರೆ, ಶೈಲಜಾ ಮುಂಡೋಡಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶರತ್ ಎ.ಕೆ ಉಪಸ್ಥಿತರಿದ್ದರು.

ಅಧ್ಯಕ್ಷ ಮುಳಿಯ ಕೇಶವ ಭಟ್ ಸ್ವಾಗತಿಸಿ ಪ್ರಸ್ತಾವನೆಗೈದರು.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶರತ್ ಎ.ಕೆ ವರದಿ ವಾಚಿಸಿ ವಂದಿಸಿದರು. ಕಿಶೋರ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಸಭೆಯಲ್ಲಿ ಪ್ರಸ್ತುತ ವರ್ಷ ಮೃತಪಟ್ಟ ಸದಸ್ಯರಿಗೆ ಹಾಗೂ ವೀರ ಮರಣ ಹೊಂದಿದ ಯೋಧರಿಗೆ  ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಇದೇ ಸಂದರ್ಭ ಸಂಘದ ಪೆಟ್ರೋಲ್ ಪಂಪ್ ನಿಂದ ಹೆಚ್ಚು ಡೀಸೆಲ್/ಪೆಟ್ರೋಲ್ ಖರೀದಿ ಮಾಡಿದವರನ್ನು ಗುರುತಿಸಲಾಯಿತು. ವರ್ಷಕ್ಕೆ 37 ಲಕ್ಷಕ್ಕೂ ಅಧಿಕ ಮೌಲ್ಯದ ಡೀಸೆಲ್ ಖರೀದಿ ಮಾಡಿದ ಸೌರಭ ವ್ಯಾನ್ ಮಾಲಕ ಕುಮಾರ್ , 26 ಲಕ್ಷಕ್ಕೂ ಅಧಿಕ ಮೌಲ್ಯದ ಡೀಸೆಲ್ ಖರೀದಿ ಮಾಡಿದ ದೇವಿಪ್ರಸಾದ್ ಚಿಕ್ಮುಳಿ, 8 ಲಕ್ಷಕ್ಕೂ ಅಧಿಕ ಮೌಲ್ಯದ ಡೀಸೆಲ್ ಖರೀದಿ ಮಾಡಿದ ಜ್ಞಾನದೀಪ ವಿದ್ಯಾಸಂಸ್ಥೆಯನ್ನು ಗೌರವಿಸಲಾಯಿತು.

ಕ್ಯಾಂಪ್ಕೋ ಶಾಖೆಗೆ ಅಧಿಕ ಪ್ರಮಾಣದಲ್ಲಿ ಅಡಿಕೆ ಹಾಕಿದ ಕೃಷಿಕರಾದ ಉಣ್ಣಿಕೃಷ್ಣನ್, ರತ್ಮಾ ಎಂ ಡಿ ಹಾಗೂ ಪರಮೇಶ್ವರ ಭಟ್ ವಳಲಂಬೆ ಅವರನ್ನು ಗುರುತಿಸಲಾಯಿತು.ಕ್ಯಾಂಪ್ಕೋ ಶಾಖೆಗೆ ಅಧಿಕ ಪ್ರಮಾಣದಲ್ಲಿ ಕೊಕೋ ಹಾಕಿದ ಕಮಲಾಕ್ಷ ಸಂಪ್ಯಾಡಿ, ತಿರುಮಲೇಶ್ವರ‌ ಚಣಿಲ , ಕೇಶವ ಮುಳಿಯ ಅವರನ್ನು ಗುರುತಿಸಲಾಯಿತು. ಅಧಿಕ ಗೊಬ್ಬರ ಖರೀದಿ ಮಾಡಿದ ಸುರೇಶ್ ಸಾಲ್ತಾಡಿ, ತೀರ್ಥರಾಮ ಕಮಿಲ, ಸುಬ್ಬಣ್ಣ ಗೌಡ ಎಂಡಿ ಅವರನ್ನು ಕೂಡಾ ಗೌರವಿಸಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

15 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

16 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

19 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

23 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

23 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago