Advertisement
ಸುದ್ದಿಗಳು

ಗುತ್ತಿಗಾರು ಸಹಕಾರಿ ಸಂಘದ ಚುನಾವಣೆ : 3 ಸ್ಥಾನಗಳಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

Share

ಗುತ್ತಿಗಾರು : ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣಾ ನಾಮಪತ್ರ ಪರಿಶೀಲನೆ ಭಾನುವಾರ ಸಂಘದ ಕಚೇರಿಯಲ್ಲಿ  ಚುನಾವಣಾಧಿಕಾರಿ ನಾಗೇಂದ್ರ ಅವರಿಂದ ನಡೆಯಿತು. ಒಟ್ಟು 32 ನಾಮಪತ್ರ ಸಲ್ಲಿಕೆಯಾಗಿತ್ತು. ಪರಿಶೀಲನೆ ಬಳಿಕ ಒಟ್ಟು 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಫೆ.17 ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.

ನಾಮಪತ್ರ ಪರಿಶೀಲನೆ ಬಳಿಕ ಸಾಲಗಾರರಲ್ಲದ ಕ್ಷೇತ್ರದಿಂದ ಹಾಲಿ ಅದ್ಯಕ್ಷ ಮುಳಿಯ ಕೇಶವ ಭಟ್ ಅವಿರೋಧವಾಗಿ ಆಯ್ಕೆಯಾದರೆ ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಆನಂದ ಹಾಗೂ ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಕುಂಞ ಅವಿರೋಧವಾಗಿ ಆಯ್ಕೆಯಾದರು. ಇವರು 3 ಮಂದಿ ಕೂಡಾ ಸಹಕಾರ ಭಾರತಿ-ಬಿಜೆಪಿ ಬೆಂಬಲಿತರಾಗಿದ್ದಾರೆ.

ಸಾಲಗಾರರ ಕ್ಷೇತ್ರದಿಂದ  ಮಹೇಶ್ ಕುಮಾರ್ ಪುಚ್ಚಪ್ಪಾಡಿ, ಜನಾರ್ಧನ ಡಿ ಜೆ, ನವೀನ್ ಬಾಳುಗೋಡು, ಬೆಳ್ಯಪ್ಪ ಗೌಡ ಕಡ್ತಲ್ ಕಜೆ , ವೆಂಕಟ್ ದಂಬೆಕೋಡಿ  , ಕೇಶವ ಹೊಸೋಳಿಕೆ, ದಿವಾಕರ ಮುಂಡೋಡಿ, ಪದ್ಮನಾಭ ಎಂ, ಕಿಶೊರ್ ಕುಮಾರ್ ಅಂಬೆಕಲ್ಲು , ದುರ್ಗಾದಾಸ್ ಎಂ, ನಾಗೇಶ್ ಪಿ, ಉದಯಕುಮಾರ್ ಡಿ ಆರ್ , ರವಿಪ್ರಕಾಶ್ ಬಿ ವಿ,  ಭರತ್ ಮುಂಡೋಡಿ, ವೆಂಕಟ್ ವಳಲಂಬೆ, ತೀರ್ಥರಾಮ ಎವಿ,ಭುವನೇಶ್ವರ ಎಚ್ ಆರ್

ಹಾಗೂ ಮಹಿಳಾ ಕ್ಷೇತ್ರದಿಂದ ಶಶಿಕಲಾ ಡಿ ಪಿ, ಮಂಜುಳಾ ಎಂ ಡಿ, ಚಂದ್ರಾವತಿ , ಪ್ರೇಮಲತಾ ಕಣದಲ್ಲಿದ್ದಾರೆ.

ಉಳಿದಂತೆ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಕೃಷ್ಣಯ್ಯ ಮೂಲೆತೋಟ ಹಾಗೂ ದಿನೇಶ್ ಕೆ   ಮತ್ತು ಹಿಂದುಳಿದ ವರ್ಗ ಬಿ ಮೀಸಲು ಕ್ಷೇತ್ರದಿಂದ ಜಯಪ್ರಕಾಶ್ ಎ ಆರ್ ಹಾಗೂ ಶೈಲೇಶ್ ಅಂಬೆಕಲ್ಲು ಕಣದಲ್ಲಿದ್ದಾರೆ.

4 ನಾಮಪತ್ರಗಳು ತಿರಸ್ಕೃತಗೊಂಡಿತ್ತು. ಆನಂದ ಕೆಂಬಾರೆ, ಎರಡು ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದ ಜನಾರ್ಧನ ಡಿಜೆ , ಜಾತಿ ಸರ್ಟಿಫಿಕೇಟ್ ನೀಡದ ಹಿನ್ನೆಲೆಯಲ್ಲಿ ದಿನಕರ ಹಾಗೂ ಸಾಲರಹಿತ ಕ್ಷೇತ್ರದಲ್ಲಿ ಸೂಕ್ತ  ಚುನಾವಣಾ ಠೇವಣಿ ಪಾವತಿಸದ ಹಿನ್ನೆಲೆಯಲ್ಲಿ ಚಂಚಲಾಕ್ಷಿ ಅವರ ನಾಮಪತ್ರ ತಿರಸ್ಕೃತವಾಗಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 hour ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago