Advertisement
ಸುದ್ದಿಗಳು

ಗುತ್ತಿಗಾರು ಸಹಕಾರಿ ಸಂಘದ ಚುನಾವಣೆ : 3 ಸ್ಥಾನಗಳಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

Share

ಗುತ್ತಿಗಾರು : ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣಾ ನಾಮಪತ್ರ ಪರಿಶೀಲನೆ ಭಾನುವಾರ ಸಂಘದ ಕಚೇರಿಯಲ್ಲಿ  ಚುನಾವಣಾಧಿಕಾರಿ ನಾಗೇಂದ್ರ ಅವರಿಂದ ನಡೆಯಿತು. ಒಟ್ಟು 32 ನಾಮಪತ್ರ ಸಲ್ಲಿಕೆಯಾಗಿತ್ತು. ಪರಿಶೀಲನೆ ಬಳಿಕ ಒಟ್ಟು 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಫೆ.17 ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.

ನಾಮಪತ್ರ ಪರಿಶೀಲನೆ ಬಳಿಕ ಸಾಲಗಾರರಲ್ಲದ ಕ್ಷೇತ್ರದಿಂದ ಹಾಲಿ ಅದ್ಯಕ್ಷ ಮುಳಿಯ ಕೇಶವ ಭಟ್ ಅವಿರೋಧವಾಗಿ ಆಯ್ಕೆಯಾದರೆ ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಆನಂದ ಹಾಗೂ ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಕುಂಞ ಅವಿರೋಧವಾಗಿ ಆಯ್ಕೆಯಾದರು. ಇವರು 3 ಮಂದಿ ಕೂಡಾ ಸಹಕಾರ ಭಾರತಿ-ಬಿಜೆಪಿ ಬೆಂಬಲಿತರಾಗಿದ್ದಾರೆ.

ಸಾಲಗಾರರ ಕ್ಷೇತ್ರದಿಂದ  ಮಹೇಶ್ ಕುಮಾರ್ ಪುಚ್ಚಪ್ಪಾಡಿ, ಜನಾರ್ಧನ ಡಿ ಜೆ, ನವೀನ್ ಬಾಳುಗೋಡು, ಬೆಳ್ಯಪ್ಪ ಗೌಡ ಕಡ್ತಲ್ ಕಜೆ , ವೆಂಕಟ್ ದಂಬೆಕೋಡಿ  , ಕೇಶವ ಹೊಸೋಳಿಕೆ, ದಿವಾಕರ ಮುಂಡೋಡಿ, ಪದ್ಮನಾಭ ಎಂ, ಕಿಶೊರ್ ಕುಮಾರ್ ಅಂಬೆಕಲ್ಲು , ದುರ್ಗಾದಾಸ್ ಎಂ, ನಾಗೇಶ್ ಪಿ, ಉದಯಕುಮಾರ್ ಡಿ ಆರ್ , ರವಿಪ್ರಕಾಶ್ ಬಿ ವಿ,  ಭರತ್ ಮುಂಡೋಡಿ, ವೆಂಕಟ್ ವಳಲಂಬೆ, ತೀರ್ಥರಾಮ ಎವಿ,ಭುವನೇಶ್ವರ ಎಚ್ ಆರ್

ಹಾಗೂ ಮಹಿಳಾ ಕ್ಷೇತ್ರದಿಂದ ಶಶಿಕಲಾ ಡಿ ಪಿ, ಮಂಜುಳಾ ಎಂ ಡಿ, ಚಂದ್ರಾವತಿ , ಪ್ರೇಮಲತಾ ಕಣದಲ್ಲಿದ್ದಾರೆ.

ಉಳಿದಂತೆ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಕೃಷ್ಣಯ್ಯ ಮೂಲೆತೋಟ ಹಾಗೂ ದಿನೇಶ್ ಕೆ   ಮತ್ತು ಹಿಂದುಳಿದ ವರ್ಗ ಬಿ ಮೀಸಲು ಕ್ಷೇತ್ರದಿಂದ ಜಯಪ್ರಕಾಶ್ ಎ ಆರ್ ಹಾಗೂ ಶೈಲೇಶ್ ಅಂಬೆಕಲ್ಲು ಕಣದಲ್ಲಿದ್ದಾರೆ.

4 ನಾಮಪತ್ರಗಳು ತಿರಸ್ಕೃತಗೊಂಡಿತ್ತು. ಆನಂದ ಕೆಂಬಾರೆ, ಎರಡು ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದ ಜನಾರ್ಧನ ಡಿಜೆ , ಜಾತಿ ಸರ್ಟಿಫಿಕೇಟ್ ನೀಡದ ಹಿನ್ನೆಲೆಯಲ್ಲಿ ದಿನಕರ ಹಾಗೂ ಸಾಲರಹಿತ ಕ್ಷೇತ್ರದಲ್ಲಿ ಸೂಕ್ತ  ಚುನಾವಣಾ ಠೇವಣಿ ಪಾವತಿಸದ ಹಿನ್ನೆಲೆಯಲ್ಲಿ ಚಂಚಲಾಕ್ಷಿ ಅವರ ನಾಮಪತ್ರ ತಿರಸ್ಕೃತವಾಗಿತ್ತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

11 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

11 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

15 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

16 hours ago