Advertisement
MIRROR FOCUS

ಗುದ್ದಲಿಪೂಜೆಗೆ ಸೀಮಿತವಾದ ಕಾರ್ಯ – ನಿರ್ಮಾಣವಾಗದ ಸೇತುವೆ : ಇದು ಜನರ ಅಳಲು…..

Share

ಆರು ತಿಂಗಳ ಹಿಂದೆ  ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಲಸಾಗಿದೆ.ಈದೀಗ ಸೇತುವೆ ಕಾಮಗಾರಿಗೆ ಟೆಂಡರ್ ಆದರೂ ಕಾಮಗಾರಿ ಆರಂಭವಾಗಿಲ್ಲ. ಕೇಳಿದರೆ ಮಳೆಗಾಲದ ನೆಪ. ಹೀಗೇ ಅನೇಕ ವರ್ಷಗಳು ಉರುಳಿದವು… ಈಗ ಗುದ್ದಲಿ ಪೂಜೆಯಾದರೂ ಸೇತುವೆ ನಿರ್ಮಾಣ ಆಗುತ್ತೋ ಇಲ್ಲವೋ ಎಂಬ ಅನುಮಾನ ಶುರುವಾಗಿದೆ.. ಹೀಗೆಂದು ಆತಂಕ, ನೋವು ತೋಡಿಕೊಳ್ಳುವವರು ತೊಡಿಕಾನ- ಮುಪ್ಪಸೇರು -ಕುದರೆಪಾಯ-ಮಾಪಳಕಜೆ ಪ್ರದೇಶದ ಜನತೆ. ಏನಿದು ಕತೆ ? ಇಲ್ಲಿ  ಓದಿ…

ತೊಡಿಕಾನ- ಮುಪ್ಪಸೇರು -ಕುದರೆಪಾಯ-ಮಾಪಳಕಜೆಗೆ ಮತ್ಸ್ಯ ತೀರ್ಥ ಹೊಳೆಗೆ ಸಂಪರ್ಕ ಸೇತುವೆ ನಿರ್ಮಾಣವಾದ ಹಿನ್ನಲೆಯಲ್ಲಿ ಈ ಭಾಗದ ಜನರು ಅನೇಕ ಸಂಕಷ್ಟ ಎದುರಿಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಕೆಲ ದಿನಗಳ ಹಿಂದೆ ವಾಹನ ಸಂಪರ್ಕ ಸಾದ್ಯವಾಗದ ಪರಿಣಾಮ ಸ್ಥಳೀಯ ಮಹಿಳೆಗೆ ದಾರಿ ಮದ್ಯೆ ಹೆರಿಗೆಯಾದ ಘಟನೆ ನಡೆದಿದೆ.ಇದು ಒಂದು ಉದಾಹರಣೆಯಾದರೆ ಐದಾರು ವರ್ಷಗಳ ಹಿಂದೆ ಮಳೆಗಾಲ ಅಸೌಖ್ಯಕೊಳಗಾದ ವ್ಯಕ್ತಿಯೊಬ್ಬರನ್ನು ತುರ್ತಾಗಾಗಿ ಸಕಾಲಕ್ಕೆ ಆಸ್ಪತ್ರೆಗೆ ಕೊಂಡುಹೋಲು ಸಾಧ್ಯವಾಗದೇ ದಾರಿ ಮದ್ಯೆ ಅವರು ಮೃತಪಟ್ಟಿದ್ದರು.

 

ಸೇತುವೆ ನಿರ್ಮಾಣಕ್ಕೆ ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಬೇಡಿಕೆ ಇಟ್ಟಿದ್ದರು.ಪರಿಣಾಮವಾಗಿ ಸಂಸದರ ನಿಧಿಯಿಂದ ರೂ.20 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು ಟೆಂಡರ್ ಆಗಿದೆ ಎಂದು ತಿಳಿದು ಬಂದಿದೆ.ಅಲ್ಲದೆ ಈ ರಸ್ತೆ ಅಭಿವೃದ್ದಿಗಾಗಿ 10 ಲಕ್ಷ ಅನುದಾನ ಇಡಲಾಗಿದೆ ಎಂದು ಶಾಸಕರೂ  ತಿಳಿಸಿದ್ದಾರೆ. ಈ ನಡುವೆ ತಕ್ಷಣವೇ ಕಾಮಗಾರಿ ಆರಂಭವಾಗುತ್ತದೆ ಎನ್ನುತ್ತಾರೆ ಜಿಪಂ ಸದಸ್ಯ ಹರೀಶ್ ಕಂಜಿಪಿಲಿ.

ಇದೆಲ್ಲದರ ಪರಿಣಾಮ 6 ತಿಂಗಳ ಹಿಂದೆ ಈ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ.ಈದೀಗ ಸೇತುವೆ ಕಾಮಗಾರಿಗೆ ಟೆಂಡರ್ ಆದರೂ ಕಾಮಗಾರಿ ಪ್ರಾರಂಭಿಸದಿರುವುದು ಈ ಭಾಗದ ಜನರ ನೋವಿಗೆ ಕಾರಣವಾಗಿದೆ. ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯ ಮತ್ಸ್ಯ ತೀರ್ಥ ಹೊಳೆಯಿಂದ ದ.ಕ ಕೊಡಗು ಜಿಲ್ಲೆಯ ಗಡಿಭಾಗ ತನಕ ದ.ಕ ಜಿಲ್ಲೆಯ ವ್ಯಾಪ್ತಿಗೆ ಈ ರಸ್ತೆ ಒಳಪಡುತ್ತದೆ. ಮತ್ಸ್ಯ ತೀರ್ಥ ಹೊಳೆ ಬದಿಯಿಂದ ಗಡಿಭಾಗ ಸುಮಾರು 1.5 ಕಿ.ಮೀ ರಸ್ತೆ ಅಭಿವೃದ್ದಿಯಾಗಬೇಕಾಗಿದೆ.ಸುಮಾರು ಎರಡು ವರ್ಷಗಳ ಹಿಂದೆ ಪೆರಂಬಾರು ಬಳಿ 60 ಮೀಟರ್ ರಸ್ತೆಯನ್ನು ಸ್ಥಳೀಯ ಗ್ರಾಮ ಪಂಚಾಯತ್,ಜಿಲ್ಲಾ ಪಂಚಾಯತ್,ಶಾಸಕ ಅನುದಾನದಲ್ಲಿ ಕಾಂಕ್ರೀಟಿಕರಣಗೊಳಿಸಲಾಗಿದೆ. ಇದರಲ್ಲಿ ಸುಮಾರು 100 ಮೀ ರಸ್ತೆ ಕಾಂಕ್ರೀಟಿಕರಣವಾಗಲು ಬಾಕಿ ಉಳಿದಿದೆ.

ಕೊಡಗು ರಸ್ತೆ ಅಭಿವೃದ್ದಿ : ದ.ಕ ಜಿಲ್ಲೆಯ ಗಡಿಭಾಗ ತನಕ ಕೊಡಗು ಜಿಲ್ಲೆಗೆ ಸೇರಿದ ರಸ್ತೆ ಸಂಪೂರ್ಣ ಸರ್ವ ಋತು ರಸ್ತೆಯಾಗಿ ಅಭಿವೃದ್ದಿಗೊಂಡಿದೆ.ಇಲ್ಲಿಯ ಮಾಪಳಕಜೆ ತೋಡಿಗೆ ಕಿರು ಸೇತುವೆ ಕಾಮಗಾರಿ ನಡೆಯುತ್ತಿದ್ದು ಅದು ಕೊನೆ ಹಂತದಲ್ಲಿದೆ.ಇದೀಗ ತೊಡಿಕಾನ ಮತ್ಸ್ಯ ತೀರ್ಥ ಹೊಳೆಗೆ ಸೇತುವೆ ನಿರ್ಮಾಣಗೊಂಡು ರಸ್ತೆ ಅಭಿವೃದ್ದಿಯಾದರೆ ತೊಡಿಕಾನ- ಕುದರೆಪಾಯ ಮಾಪಳಕೆ ರಸ್ತೆ ಸರ್ವ ಋತು ರಸ್ತೆಯಾಗಿ ಅಭಿವೃದ್ದಿಗೊಳ್ಳಲು ಸಹಕಾರಿಯಾಗುತ್ತದೆ.ಇದರಿಂದ ಅಂತರ್ ಜಿಲ್ಲಾ ಸಂಪರ್ಕ ರಸ್ತೆ ಅಭಿವೃದ್ದಿಯಾಗುತ್ತದೆ. ತೊಡಿಕಾನ ಪ್ರವಾಸಿ,ಧಾರ್ಮಿಕ ಕೇಂದ್ರವಾಗಿ ಅಭಿವೃದ್ದಿಗೊಳ್ಳಲು ಸಹಕಾರಿಯಾಗುತ್ತದೆ.ಸುಮಾರು ಒಂದುವರೆ ಕಿ ಮೀ ನಷ್ಟು ರಸ್ತೆಯನ್ನು ಅಬಿವೃದ್ದಿ ಮಾಡಲು ದ.ಕ ಜಿಲ್ಲೆಯ ಜನಪ್ರತಿನಿಧಿಗಳು ಮುಂದೆಯೂ ಪ್ರಮಾಣಿಕ ಪ್ರಯತ್ನ ಮಾಡಬೇಕಾಗಿದೆ.ಅಲ್ಲದೆ ಕಿರು ಸೇತುವೆ ಕಾಮಗಾರಿ ಪ್ರಾರಂಭಿಸಲು ಗುತ್ತಿಗೆದಾರರಿಗೆ ಸಂಬಂಧಪಟ್ಟ ಇಲಾಖೆ,ಜನಪ್ರತಿನಿಧಿಗಳು ಸೂಚಿಸಬೇಕಾಗಿದೆ.

ತೊಡಿಕಾನ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿದ ಸುದ್ದಿ ಕೇಳಿ ಕುಸಿಯಾಯಿತು.ಆದರೆ ಇನ್ನು ಕಾಮಗಾರಿ ಪ್ರಾರಂಭವಾಗದಿರುವುದು ನಿರಾಶೆ ತಂದಿದೆ.ಕಾಮಗಾರಿ ಆದಷ್ಟು ಬೇಗ ಪ್ರಾರಂಬಿಸುವಂತೆ ಜನಪ್ರತಿನಿಧಿಗಳು ಗುತ್ತಿಗೆದಾರರ ಮೇಲೆ ಒತ್ತಡ ಹೇರಬೇಕಾಗಿದೆ ಎನ್ನುತ್ತಾರೆ ಸ್ಥಳಿಯರಾದ ಪುರುಷೋತ್ತಮ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

5 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

5 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

5 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

5 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

5 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

13 hours ago