ಸುಳ್ಯ: ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ, ಸಸ್ಯರಾಶಿಗಳ ಮಹತ್ವ ಜಾಗೃತಿಗಾಗಿ ಗುಬ್ಬಚ್ಚಿಗೂಡು ಕಾರ್ಯಾಗಾರ ನಡೆಯಿತು. ನಮ್ಮ ಮನೆಗಳಲ್ಲಿ ಪಕ್ಷಿಗಳಿಗೆ ಧಾನ್ಯ ಮತ್ತು ನೀರಿಡುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಲ್ಕುಡ ದೈವಸ್ಥಾನದ ಆವರಣದಲ್ಲಿ ಗುಬ್ಬಚ್ಚಿಗೂಡು ಕಾರ್ಯಾಗಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ರಂಜಿತ್ ಬೇಕರಿಯ ರಂಜಿತ್ ರವರಿಗೆ ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಇಡುವ ಮಣ್ಣಿನ ಪಾತ್ರೆಯನ್ನು ಉಚಿತವಾಗಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ನೀಡಿದರು.
ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಕರಪತ್ರದ ಮೂಲಕ ಅಭಿಯಾನದ ಉದ್ದೇಶ ವಿವರಿಸಿದರು. ಸ್ಥಳೀಯರಾದ ದಾಸಪ್ಪ ಬಂಗ್ಲೆಗುಡ್ಡೆ ಹಾಗೂ ಸುನೀತಾ ವಿಶ್ವನಾಥ ಪಡ್ಡಬೈಲು ಉಪಸ್ಥಿತರಿದ್ದರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…