ಸುಳ್ಯ: ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ, ಸಸ್ಯರಾಶಿಗಳ ಮಹತ್ವ ಜಾಗೃತಿಗಾಗಿ ಗುಬ್ಬಚ್ಚಿಗೂಡು ಕಾರ್ಯಾಗಾರ ನಡೆಯಿತು. ನಮ್ಮ ಮನೆಗಳಲ್ಲಿ ಪಕ್ಷಿಗಳಿಗೆ ಧಾನ್ಯ ಮತ್ತು ನೀರಿಡುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಲ್ಕುಡ ದೈವಸ್ಥಾನದ ಆವರಣದಲ್ಲಿ ಗುಬ್ಬಚ್ಚಿಗೂಡು ಕಾರ್ಯಾಗಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ರಂಜಿತ್ ಬೇಕರಿಯ ರಂಜಿತ್ ರವರಿಗೆ ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಇಡುವ ಮಣ್ಣಿನ ಪಾತ್ರೆಯನ್ನು ಉಚಿತವಾಗಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ನೀಡಿದರು.
ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಕರಪತ್ರದ ಮೂಲಕ ಅಭಿಯಾನದ ಉದ್ದೇಶ ವಿವರಿಸಿದರು. ಸ್ಥಳೀಯರಾದ ದಾಸಪ್ಪ ಬಂಗ್ಲೆಗುಡ್ಡೆ ಹಾಗೂ ಸುನೀತಾ ವಿಶ್ವನಾಥ ಪಡ್ಡಬೈಲು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…